ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

ಪುತ್ತೂರು: ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಎಂದು ಪರಿಗಣಿಸಲ್ಪಟ್ಟ ಪದ್ಮಶ್ರೀ ಡಾ. ಎಸ್ ಆರ್ ರಂಗನಾಥನ್ ಅವರ 132 ನೇ ಜನ್ಮ ದಿನದ ಅಂಗವಾಗಿ ಆಚರಿಸಲ್ಪಡುತ್ತಿರುವ  ರಾಷ್ಟ್ರೀಯ  ಗ್ರಂಥಪಾಲಕರ ದಿನಾಚರಣೆ’ ಯನ್ನು ಸಂತ ಫಿಲೋಮಿನಾ ಕಾಲೇಜು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಆಯೋಜನೆಯಲ್ಲಿ ಕಾಲೇಜಿನ ಸ್ನಾತಕೋತ್ತರ ಸಭಾಭವನದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ಮಾತನಾಡಿ,  ಪ್ರತಿಯೊಂದು ಜೀವಿಗೂ ಬದುಕಲು ನೀರು, ಗಾಳಿ, ಬೆಳಕು ಮತ್ತು ಆಹಾರ ಹೇಗೆ ಮುಖ್ಯವೋ ಹಾಗೆ ಮನುಷ್ಯನಲ್ಲಿ […]

ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ Read More »

ಸುಳ್ಯ ತಾಲೂಕು ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯಿತಿ ಗುತ್ತಿಗೆದಾರರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಸುಳ್ಯ: ತಾಲೂಕು ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ತೀರ್ಥಕುಮಾರ್ ಕುಂಚಡ್ಕ ಹಾಗೂ ಕಾರ್ಯದರ್ಶಿಯಾಗಿ ಮನುದೇವ್ ಪರಮಲೆ, ಕೋಶಾಧಿಕಾರಿಯಾಗಿ ಗಿರೀಶ್ ನಾರ್ಕೋಡು ಆಯ್ಕೆಯಾಗಿದ್ದಾರೆ. ಸುಳ್ಯದ ಬೀರಮಂಗಲದ ಗೆಸ್ಟ್ ಹೌಸ್ನಲ್ಲಿ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಬಾಳುಗೋಡುರವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಂಘದ ಉಪಾಧ್ಯಕ್ಷರುಗಳಾಗಿ ಶಬೀರ್ ಸಾಹೇಬ್, ಪ್ರಶಾಂತ್ ಕಲ್ಲುಗುಂಡಿ, ಜತೆ ಕಾರ್ಯದರ್ಶಿಗಳಾಗಿ ಶ್ರೇಯಸ್ ಮುತ್ಲಾಜೆ ಮತ್ತು ಸುನಿಲ್ ರೈ ಮೇನಾಲ ಆಯ್ಕೆಯಾದರು.  ಸುಬೋಧ್ ಶೆಟ್ಟಿ ಮೇನಾಲ

ಸುಳ್ಯ ತಾಲೂಕು ಲೋಕೋಪಯೋಗಿ ಇಲಾಖೆ, ಜಿಲ್ಲಾ ಪಂಚಾಯಿತಿ ಗುತ್ತಿಗೆದಾರರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ Read More »

ವಯನಾಡಿನಲ್ಲಿ ಭೂಕುಸಿತ | ಮುಂಡಕ್ಕೆ ಮತ್ತು ಚೂರಲ್‌ ಮಲೆಯ ಶಾಖೆಗಳಲ್ಲಿನ ಸಾಲ ಮನ್ನಾ ಮಾಡಲು ಸರ್ಕಾರಿ ಸ್ವಾಮ್ಯದ ಕೇರಳ ಬ್ಯಾಂಕ್ ನಿರ್ಧಾರ

ವಯನಾಡ್: ವಯನಾಡಿನ ಭೂಕುಸಿತ ಪೀಡಿತ ಪ್ರದೇಶಗಳಾದ ಮುಂಡಕ್ಕೆ ಮತ್ತು ಚೂರಲ್‌ ಮಲೆಯ ತನ್ನ ಶಾಖೆಗಳಲ್ಲಿನ ಸಾಲ ಮನ್ನಾ ಮಾಡಲು ಸರ್ಕಾರಿ ಸ್ವಾಮ್ಯದ ಕೇರಳ ಬ್ಯಾಂಕ್ ನಿರ್ಧರಿಸಿದೆ. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ ಮನೆ, ಆಸ್ತಿಪಾಸ್ತಿಗಳನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಕುಟುಂಬಗಳಿಗೆ ಕೇರಳ ಸರ್ಕಾರ ತುರ್ತು ಆರ್ಥಿಕ ನೆರವನ್ನು ಘೋಷಿಸಿದೆ. ನಿತ್ಯ 300 ರೂ. ಹಣವನ್ನು ಸಂತ್ರಸ್ತ ಕುಟುಂಬಗಳಿಗೆ ನೀಡಲು ನಿರ್ಧರಿಸಿದೆ. ಈ ನೆರವು ಪ್ರತಿ ಕುಟುಂಬದ ಗರಿಷ್ಠ ಇಬ್ಬರಿಗೆ ಸಿಗಲಿದೆ. ಒಂದು ವೇಳೆ ಕುಟುಂಬದ ಸದಸ್ಯರು ಅನಾರೋಗ್ಯಕ್ಕೆ ತುತ್ತಾಗಿದ್ದರೆ,

ವಯನಾಡಿನಲ್ಲಿ ಭೂಕುಸಿತ | ಮುಂಡಕ್ಕೆ ಮತ್ತು ಚೂರಲ್‌ ಮಲೆಯ ಶಾಖೆಗಳಲ್ಲಿನ ಸಾಲ ಮನ್ನಾ ಮಾಡಲು ಸರ್ಕಾರಿ ಸ್ವಾಮ್ಯದ ಕೇರಳ ಬ್ಯಾಂಕ್ ನಿರ್ಧಾರ Read More »

ವೃದ್ಧ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ನೇಣು ಬಿಗಿದು ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಲುಗುಂಡಿಯಲ್ಲಿ ನಡೆದಿದೆ. ಸಂಪಾಜೆ ಗ್ರಾಮದ ದಂಡಕಜೆ ನಿವಾಸಿ ಲಾರೆನ್ಸ್(70) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.

ವೃದ್ಧ ನೇಣು ಬಿಗಿದು ಆತ್ಮಹತ್ಯೆ Read More »

ಲಾಡ್ಜ್ ನಲ್ಲಿ  ಭಿನ್ನ ಜೋಡಿ ಪತ್ತೆ

ಪುತ್ತೂರು : ಪುತ್ತೂರು ನೆಹರುನಗರದ ಲಾಡ್ಜ್ ನಲ್ಲಿ ಭಿನ್ನ ಧರ್ಮದ ದಂಪತಿಗಳು  ಉಳಿದುಕೊಂಡಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಭಿನ್ನಧರ್ಮದ ಜೋಡಿ ನೆಹರುನಗರದ ವಸತಿ ಗೃಹದಲ್ಲಿ ಉಳಿದುಕೊಂಡಿರುವ ಬಗ್ಗೆ ಪೊಲೀಸರಿಗೆ ಬಂದ ಮಾಹಿತಿಯಂತೆ ಸ್ಥಳಕ್ಕೆ ತೆರಳಿ ದಾಖಲೆಗಳನ್ನು ಪರಿಶೀಲಿಸಿ ಕೊಠಡಿ ಬಾಡಿಗೆಗೆ ಪಡೆದು ಉಳಿದುಕೊಂಡಿದ್ದ ಜೋಡಿಯನ್ನು ವಿಚಾರಣೆ ನಡೆಸಿದಾಗ ಅವರು ಒಂದೇ ಧರ್ಮಕ್ಕೆ ಸೇರಿದ ಬೆಂಗಳೂರು ಮೂಲದ ದಂಪತಿಗಳೆಂದು ತಿಳಿದುಬಂದಿದೆ. ಈ ಬಗ್ಗೆ ಲಾಡ್ಜ್ ನ ಮಾಲಕರು ಪ್ರತಿಕ್ರಿಯೆ ನೀಡಿದ್ದು, ‘ನಾವು 4 ವರ್ಷಗಳ ಹಿಂದೆಯೇ ಅಗ್ರಿಮೆಂಟ್ ಮೂಲಕ

ಲಾಡ್ಜ್ ನಲ್ಲಿ  ಭಿನ್ನ ಜೋಡಿ ಪತ್ತೆ Read More »

ಕಮಲಶಿಲೆ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಬಂಟ್ವಾಳ: ಹಿರಿಯರು ಕ್ರಿಯಾಶೀಲರಾಗಿರಲು ಪ್ರತಿಷ್ಠಾನದ ಚಟುವಟಿಕೆಗಳು ಪೂರಕವಾಗಿದ್ದು 50 ವರ್ಷಕ್ಕಿಂತ ಹೆಚ್ಚಿನ ವಯೋಮಾನದವರು ಸೇರ್ಪಡೆಗೊಳ್ಳುವ ಮೂಲಕ  ಉತ್ತಮ ಸೇವಾ ಕಾರ್ಯಗಳು ನಡೆಯುವಂತಾಗಬೇಕೆಂದು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರು ಪ್ರತಿಷ್ಠಾನದ ಅಧ್ಯಕ್ಷ ಕಯ್ಯುರು ನಾರಾಯಣ ಭಟ್ ಹೇಳಿದರು. ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರು ಬಂಟ್ವಾಳ  ಆಯೋಜಿಸಿದ್ದ ಕ್ಷೇತ್ರ ಸಂದರ್ಶನ ಕಾರ್ಯಕ್ರಮದ ನಿಮಿತ್ತ ಕಮಲಶಿಲೆ ಕ್ಷೇತ್ರದಲ್ಲಿ ಜರಗಿದ ಪ್ರತಿಷ್ಠಾನದ ಕೇಂದ್ರ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿಷ್ಠಾನದ ಮೂರನೇ ವಾರ್ಷಿಕೋತ್ಸವ ಡಿಸೆಂಬರ್ ತಿಂಗಳಲ್ಲಿ ಜರಗಲಿದ್ದು

ಕಮಲಶಿಲೆ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ Read More »

ಶಾಲಾ ಶಿಕ್ಷಕರಾಗಲು ಬಿಎಡ್ ಅರ್ಹತೆ ಕಡ್ಡಾಯವನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್‍

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಿಎಡ್ ಅರ್ಹತೆ ಹೊಂದಿರಬೇಕು ಎಂಬ ಕೇಂದ್ರ ಸರ್ಕಾರ ಕೈಗೊಂಡ ಆದೇಶವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಕೇಂದ್ರ ಸರ್ಕಾರದ ನಿರ್ಧಾರ ಸಂಪೂರ್ಣ ಸ್ಟೇಚ್ಛೆಯಿಂದ ಕೂಡಿದೆ. ಮತ್ತು ತಾರ್ಕಿಕತೆಯನ್ನು ಮೀರಿದೆ. ಹಾಗಾಗಿ, ಬಿಎಡ್ ಪದವಿ ಶಾಲಾ ಶಿಕ್ಷಕರಾಗಲು ಕಡ್ಡಾಯ ಅರ್ಹತೆಯಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠ ಹೇಳಿದೆ. ಸುಪ್ರೀಂ ಕೋರ್ಟ್‌ನ ನ್ಯಾ. ಅನಿರುದ್ಧ ಬೋಸ್ ಹಾಗೂ ನ್ಯಾ. ಸುಧಾಂಶು ಧುಲಿಯಾ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ತೀರ್ಪು ನೀಡಿದೆ. ಮಕ್ಕಳಿಗೆ ಉಚಿತ, ಕಡ್ಡಾಯ ಹಾಗೂ

ಶಾಲಾ ಶಿಕ್ಷಕರಾಗಲು ಬಿಎಡ್ ಅರ್ಹತೆ ಕಡ್ಡಾಯವನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್‍ Read More »

ಮೆಡಿಕಲ್ ಕಾಲೇಜು ಸ್ಥಾಪನೆ ವಿಚಾರದಲ್ಲಿ ಶಾಕಿಂಗ್ ವಿಚಾರ ಪ್ರಸ್ತಾಪಿಸಿದ ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ್‍ | ಸದ್ಯ ಕಾಲೇಜು ಸ್ಥಾಪನೆಯ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಇಲ್ಲ

ಬೆಂಗಳೂರು: ಈ ಬಾರಿಯ ರಾಜ್ಯ ವಿಧಾನ ಸಭಾ ಅಧಿವೇಶನದಲ್ಲಿ ಪುತ್ತೂರಿನ ಜನತೆಗೆ ಶಾಕಿಂಗ್ ನ್ಯೂಸ್ ದೊರೆತಿದೆ. ಪುತ್ತೂರಿನ ಜನತೆಯ ಬಹುದಿನದ ಬೇಡಿಕೆಯಾದ, ನದ್ಯ ಅಭಿಯಾನದ ರೂಪ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಕನಸ್ಸಿಗೆ ದೊಡ್ಡ ಆಘಾತವಾಗಿದೆ. ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸುಮಾರು 610ಕೊಟಿ ಅನಾವರ್ತಕ ವೆಚ್ಚ ಹಾಗೂ 60 ಕೋಟಿ ಅವರ್ತಕ

ಮೆಡಿಕಲ್ ಕಾಲೇಜು ಸ್ಥಾಪನೆ ವಿಚಾರದಲ್ಲಿ ಶಾಕಿಂಗ್ ವಿಚಾರ ಪ್ರಸ್ತಾಪಿಸಿದ ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ್‍ | ಸದ್ಯ ಕಾಲೇಜು ಸ್ಥಾಪನೆಯ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಇಲ್ಲ Read More »

ಬಿಜೆಪಿ ವತಿಯಿಂದ ಬೃಹತ್ ‘ತಿರಂಗ’ ಜಾಥಾ | ರಾಷ್ಟ್ರಪಿತನಿಗೆ ಮಾಲಾರ್ಪಣೆ ಮಾಡುವ ರಾಷ್ಟ್ರೀಯ ಬದ್ಧತೆ ತೋರಿದ ಬಿಜೆಪಿ ಮುಖಂಡರು

ಪುತ್ತೂರು : ಬಿಜೆಪಿ ವಿಧಾನಸಭಾ ಕ್ಷೇತ್ರದವತಿಯಿಂದ ಬೃಹತ್ ‘ತಿರಂಗ’ ಜಾಥಾ ಮಂಗಳವಾರ ನಡೆಯಿತು. ಬೆಳಿಗ್ಗೆ ಬಿಜೆಪಿ ಕಚೇರಿಯಿಂದ ಹೊರ ತಿಂರಗ ಜಾಥಾ ಮೊಳಹಳ್ಳಿ ಶಿವರಾಯ ವೃತ್ತದ ಬಳಿ ಬಂದು ಅಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಬಳಿಕ ಜಾಥಾ ಮುಖ್ಯ ರಸ್ತೆಯಿಂದ ತೆರಳಿ ಬಸ್ ನಿಲ್ದಾಣದ ಬಳಿ ಇರುವ ಗಾಂಧಿ ಕಟ್ಟೆಗೆ ತೆರಳಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಆಡಳಿತ ಸೌಧದ ಬಳಿಯಿರುವ ಅಮರ್ ಜವಾನ್ ಸ್ಮಾರಕದ ಬಳಿ ತೆರಳಿ ಜಾಥಾ ಸಮಾಪನಗೊಂಡಿತು. ಮಾಜಿ ಶಾಸಕ ಸಂಜೀವ

ಬಿಜೆಪಿ ವತಿಯಿಂದ ಬೃಹತ್ ‘ತಿರಂಗ’ ಜಾಥಾ | ರಾಷ್ಟ್ರಪಿತನಿಗೆ ಮಾಲಾರ್ಪಣೆ ಮಾಡುವ ರಾಷ್ಟ್ರೀಯ ಬದ್ಧತೆ ತೋರಿದ ಬಿಜೆಪಿ ಮುಖಂಡರು Read More »

ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ದ.ಕ.ಜಿಲ್ಲಾ ಅಧ್ಯಕ್ಷರಾಗಿ ಭರತ್ ಮುಂಡೋಡಿ ನೇಮಕ | ನಾಳೆ (ಆ14) ಮಂಗಳೂರಿನಲ್ಲಿ ಪ್ರಾಧಿಕಾರದ ಕಚೇರಿ ಶುಭಾರಂಭ

ಪುತ್ತೂರು: ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ದ.ಕ.ಜಿಲ್ಲಾ ಅಧ್ಯಕ್ಷರಾಗಿ ಕೆಪಿಸಿಸಿ ಸಂಯೋಜಕ ಭರತ್ ಮುಂಡೋಡಿ ಅವರನ್ನು ನೇಮಕ ಮಾಡಲಾಗಿದೆ. ಪ್ರಾಧಿಕಾರದಿಂದ ಪ್ರತಿ ಜಿಲ್ಲಾ ಅಧ್ಯಕ್ಷರಿಗೆ ಕಚೇರಿ ನೀಡಲಾಗುತ್ತಿದ್ದು, ಮಂಗಳೂರಿನಲ್ಲಿ ಆ.14 ಬುಧವಾರ ಬೆಳಿಗ್ಗೆ 10.30 ಕ್ಕೆ ಕಚೇರಿ ಉದ್ಘಾಟನೆಗೊಳ್ಳಲಿದೆ. ಮಹಿಳೆಯರ ಸ್ವಾವಲಂಬನೆಗಾಗಿಯೇ  ಇರುವ ಗ್ಯಾರಂಟಿ ಯೋಜನೆ ಇರುವುದು. ಈ ನಿಟ್ಟಿನಲ್ಲಿ ಸಮಾಜದಲ್ಲಿ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಂಡಿರುವ ಗುತ್ತಿಗಾರಿನ ಲೀಲಾವತಿ ಅಪ್ಪಣ್ಣ ಆಚಾರಿ ಅವರು ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಸಮಾರಂಭಕ್ಕೆ ಆಗಮಿಸುವಇತರ ಅತಿಥಿಗಳು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಕಚೇರಿ ಉದ್ಘಾಟನೆ

ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ದ.ಕ.ಜಿಲ್ಲಾ ಅಧ್ಯಕ್ಷರಾಗಿ ಭರತ್ ಮುಂಡೋಡಿ ನೇಮಕ | ನಾಳೆ (ಆ14) ಮಂಗಳೂರಿನಲ್ಲಿ ಪ್ರಾಧಿಕಾರದ ಕಚೇರಿ ಶುಭಾರಂಭ Read More »

error: Content is protected !!
Scroll to Top