ಅನಾರೋಗ್ಯದಿಂದ ಹೂವಿನ ವ್ಯಾಪಾರಿ ನಿಧನ

ಪುತ್ತೂರು: ಉಳ್ಳಾಲ್ತಿ ಫ್ಲವರ್ ಸ್ಟಾಲ್ ಮಾಲಕ, ಪಂಗ್ಲಾಯಿ ನಿವಾಸಿ ಹರೀಶ್ ಯಾನೆ ಹರ್ಷ (47) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಡಿ. 31 ರಂದು ನಿಧನರಾದರು. ಮೃತರು ತಂದೆ, ತಾಯಿ, ಪತ್ನಿ, ಪುತ್ರಿ, ಸಹೋದರ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಅನಾರೋಗ್ಯದಿಂದ ಹೂವಿನ ವ್ಯಾಪಾರಿ ನಿಧನ Read More »

ಗ್ಯಾಸ್‌ ಸಿಲಿಂಡರ್‌ ಬೆಲೆ 111 ರೂ. ಏರಿಕೆ

ಹೊಸ ವರ್ಷದ ಮೊದಲ ದಿನವೇ ಬೆಲೆ ಏರಿಕೆಯ ಶಾಕ್‌ ನವದೆಹಲಿ : ಹೊಸ ವರ್ಷದ ಮೊದಲ ದಿನವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಕೆ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಪ್ರತಿ ತಿಂಗಳಿನಂತೆ ಈ ಬಾರಿಯೂ ಗೃಹ ಮತ್ತು ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ನವೀಕರಿಸಲಾಗಿದೆ. ಕಳೆದ ವರ್ಷವಿಡೀ ಬೆಲೆ ಇಳಿಕೆಯಾಗಿತ್ತು. ಇದೀಗ ದರ ಏರಿಕೆಯಾಗಿದೆ. ಇಂಡಿಯನ್ ಆಯಿಲ್ ಪ್ರಕಾರ, ದೆಹಲಿಯಲ್ಲಿ ಇಂದಿನಿಂದ 19 ಕೆಜಿ ಎಲ್‌ಪಿಜಿ ಸಿಲಿಂಡರ್ 1580.50 ರೂ.ಗಳ ಬದಲಿಗೆ 1691.50 ರೂ.ಗಳಿಗೆ ಲಭ್ಯವಾಗಲಿದೆ.

ಗ್ಯಾಸ್‌ ಸಿಲಿಂಡರ್‌ ಬೆಲೆ 111 ರೂ. ಏರಿಕೆ Read More »

ಭಾರತಕ್ಕೂ ಬಂದರಾ ಅನಾಮಿಕ ಶೂಟರ್ಸ್‌? : ಪುಣೆಯಲ್ಲಿ ಬಾಂಬ್‌ ಸ್ಫೋಟ ಆರೋಪಿಯ ಹತ್ಯೆ

ಬೈಕಿನಲ್ಲಿ ಬಂದು ಗುಂಡಿಕ್ಕಿ ಪಲಾಯನ ಮಾಡಿದ ಅಜ್ಞಾತ ದುಷ್ಕರ್ಮಿಗಳು ಪುಣೆ: 2012ರಲ್ಲಿ ಪುಣೆಯಲ್ಲಿ ಸಂಭವಿಸಿದ ಸ್ಫೋಟ ಆರೋಪಿಯನ್ನು ಮಹಾರಾಷ್ಟ್ರದಲ್ಲಿ ಅನಾಮಿಕರು ಗುಂಡಿಕ್ಕಿ ಕೊಂದು ಹಾಕಿದ್ದಾರೆ ಎಂದು ವರದಿಯಾಗಿದೆ. 2012ರ ಪುಣೆ ಸರಣಿ ಸ್ಫೋಟ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಬಂಟಿ ಜಹಗೀರ್ದಾರ್ ಎಂಬಾತನನ್ನು ಬುಧವಾರ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಶ್ರೀರಾಂಪುರ ಪಟ್ಟಣದಲ್ಲಿ ಅನಾಮಿಕರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 50 ವರ್ಷದ ಜಹಗೀರ್ದಾರ್ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೊರಾವಕೆ ಕಾಲೇಜು ರಸ್ತೆಯಲ್ಲಿರುವ ಸ್ಮಶಾನದಿಂದ ದ್ವಿಚಕ್ರ ವಾಹನದಲ್ಲಿ

ಭಾರತಕ್ಕೂ ಬಂದರಾ ಅನಾಮಿಕ ಶೂಟರ್ಸ್‌? : ಪುಣೆಯಲ್ಲಿ ಬಾಂಬ್‌ ಸ್ಫೋಟ ಆರೋಪಿಯ ಹತ್ಯೆ Read More »

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಮೋದಿ

ಶಾಂತಿ ನೆಲೆಸಿ, ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಸಿಗಲಿ ಎಂದು ಹಾರೈಕೆ ನವದೆಹಲಿ : ಜಗತ್ತು 2026ಕ್ಕೆ ಕಾಲಿಡುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ದೇಶದಲ್ಲಿ ಶಾಂತಿ ನೆಲೆಸಿ, ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಎಕ್ಸ್‌​​ನಲ್ಲಿ ಸಂದೇಶವನ್ನು ಹಂಚಿಕೊಂಡಿರುವ ಮೋದಿ, ಜನರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಶಸ್ಸು ಪಡೆಯಲಿ ಎಂದು ಹಾರೈಸಿದ್ದಾರೆ. ಹೊಸ ವರ್ಷವು ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಮತ್ತು

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಮೋದಿ Read More »

ಧರ್ಮಸ್ಥಳ ಪ್ರಕರಣಕ್ಕೆ ದಿಢೀರ್‌ ತಿರುವು : ಘಟಾನುಘಟಿ ವಕೀಲರ ಎಂಟ್ರಿ

ದೇವಸ್ಥಾನದ ಪರವಾಗಿ ವಾದ ಮಾಡಲು ನಾಡಿನ ಖ್ಯಾತ ವಕೀಲರಿಂದ ವಕಾಲತ್ತು ಸಲ್ಲಿಕೆ ಬೆಳ್ತಂಗಡಿ: ದೇಶಾದ್ಯಂತ ಭಾರಿ ಸುದ್ದಿಯಾಗಿದ್ದ ಧರ್ಮಸ್ಥಳ ಷಡ್ಯಂತ್ರ ಪ್ರಕರಣಕ್ಕೆ ದಿಢೀರ್‌ ಎಂದು ತಿರುವು ಸಿಕ್ಕಿದ್ದು, ಧರ್ಮಸ್ಥಳ ದೇವಸ್ಥಾನದ ಪರವಾಗಿ ವಾದಿಸಲು ನಾಡಿನ ಖ್ಯಾತ ವಕೀಲರು ಮುಂದೆ ಬಂದಿದ್ದಾರೆ. ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆಯಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 39/2025ರ ಸಂಬಂಧ ಬೆಂಗಳೂರಿನ ಹಿರಿಯ ನ್ಯಾಯವಾದಿ ಸಿ.ವಿ. ನಾಗೇಶ್ ಹಾಗೂ ಪುತ್ತೂರಿನ ಮಹೇಶ್ ಕಜೆ

ಧರ್ಮಸ್ಥಳ ಪ್ರಕರಣಕ್ಕೆ ದಿಢೀರ್‌ ತಿರುವು : ಘಟಾನುಘಟಿ ವಕೀಲರ ಎಂಟ್ರಿ Read More »

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ ನಿಧನ

40ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಶಿಕ್ಷಣ ತಜ್ಞ ಮಂಗಳೂರು : ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ (86) ಗುರುವಾರ (ಜ.1) ಮುಂಜಾನೆ ನಿಧನರಾಗಿದ್ದಾರೆ. ಶಿಕ್ಷಣ ತಜ್ಞ, ಉದ್ಯಮಿ ಮತ್ತು ಸಮಾಜ ಸೇವಕರಾಗಿದ್ದ ಅವರು, ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ ಮತ್ತು ಗೌರವ ಡಾಕ್ಟರೇಟ್ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದರು. ರಾಜ್ಯದ ಪ್ರಮುಖ ಶಿಕ್ಷಣ ತಜ್ಞರ, ಉದ್ಯಮಿ ಮತ್ತು ಸಮಾಜ ಸೇವಕರಾಗಿ ಅವರು ಗುರುತಿಸಿಕೊಂಡಿದ್ದಾರೆ. ವಿನಯ ಹೆಗ್ಡೆ

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ ನಿಧನ Read More »

ಸುಳ್ಯ : ರಿಕ್ಷಾ ಚಾಲಕನ ಹತ್ಯೆ ಮಾಡಿದ ಇಬ್ಬರ ಬಂಧನ

ಸುಳ್ಯ: ಆಟೋರಿಕ್ಷಾ ಚಾಲಕ ಅಬ್ದುಲ್ ಜಬ್ಬಾರ್ ಎಂಬವರನ್ನು ಕೊಲೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಕಸಬ ನಿವಾಸಿ ಮೊಹಮ್ಮದ್ ರಫೀಕ್ (41) ಮತ್ತು ಸುಳ್ಯ ಸಂಪಾಜೆ ನಿವಾಸಿ ಮನೋಹರ್ ಕೆ.ಎಸ್ ಯಾನೆ ಮನು (42)ಬಂದಿತ ಆರೋಪಿಗಳು. ಅಬ್ದುಲ್ ಜಬ್ಬಾರ್ ಎಂಬವರನ್ನು 2025ರ ಅಕ್ಟೋಬರ್‌ 16ರಂದು ಮಧ್ಯಾಹ್ನ ವೇಳೆ, ಆರೋಪಿಗಳಾದ ಮೊಹಮ್ಮದ್ ರಫೀಕ್ ಮತ್ತು ಇತರರು, ಬಾಡಿಗೆಯ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿ, ಅಲ್ಲಿಂದ ಸುಳ್ಯ ಕಲ್ಲುಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ

ಸುಳ್ಯ : ರಿಕ್ಷಾ ಚಾಲಕನ ಹತ್ಯೆ ಮಾಡಿದ ಇಬ್ಬರ ಬಂಧನ Read More »

ಪುತ್ತೂರು : ನಿವೃತ್ತ ಪ್ರಾಂಶುಪಾಲರ ಮನೆಯಲ್ಲಿ ದರೋಡೆಗೆ ಯತ್ನಿಸಿದ ದಂಪತಿ ಬಂಧನ

ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಗೆ ಮಧ್ಯರಾತ್ರಿ ನುಗ್ಗಿ ದರೋಡೆಗೆ ಯತ್ನಿಸಿ, ದಂಪತಿಯನ್ನು ಬೆದರಿಸಿದ ಪ್ರಕರಣದಲ್ಲಿ ಪುತ್ತೂರು ನಗರ ಪೊಲೀಸರು ಆರೋಪಿಗಳಾದ ಆರ್ಚಕ ಹಾಗೂ ಆತನ ಪತ್ನಿಯನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಕಾರ್ತಿಕ್ ರಾವ್(31) ಹಾಗೂ ಅವನ ಪತ್ನಿ ಸ್ವಾತಿ ರಾವ್ ಬಂಧಿತ ಆರೋಪಿಗಳು. ಪುತ್ತೂರು ಕಸಬಾ ನಿವಾಸಿ ನಿವೃತ್ತ ಪ್ರಾಂಶುಪಾಲ ಎ.ವಿ.ನಾರಾಯಣ(84) ಅವರು ನೀಡಿದ ದೂರಿನಂತೆ ಡಿ.17ರ ಮಧ್ಯರಾತ್ರಿ ಇಬ್ಬರು ಅಪರಿಚಿತರು ಹೆಲೈಟ್ ಧರಿಸಿಕೊಂಡು ಮುಖಚಹರೆಯನ್ನು ಮರೆಮಾಚಿ ಮನೆ ಹಿಂಬಾಗಿಲಿನಿಂದ ಪ್ರವೇಶಿಸಿ

ಪುತ್ತೂರು : ನಿವೃತ್ತ ಪ್ರಾಂಶುಪಾಲರ ಮನೆಯಲ್ಲಿ ದರೋಡೆಗೆ ಯತ್ನಿಸಿದ ದಂಪತಿ ಬಂಧನ Read More »

ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ : ಪೊಲೀಸರ ಕಣ್ಗಾವಲಿನ ನಡುವೆ ಮೋಜುಮಸ್ತಿ

ಪಟಾಕಿ ಸಿಡಿಸಿ, ಕೇಕ್‌ ಕಟ್‌ ಮಾಡಿ ಸಂಭ್ರಮಿಸಿದ ಜನ ಮಂಗಳೂರು: ಹೊಸ ವರ್ಷವನ್ನು ಇಡೀ ವಿಶ್ವವೇ ಸಂಭ್ರಮದಿಂದ ಸ್ವಾಗತಿಸಿದೆ. ಮಂಗಳೂರು, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಗಡಿಯಾರದ ಮುಳ್ಳು ರಾತ್ರಿ 12ನ್ನು ಸ್ಪರ್ಶಿಸುತ್ತಿದ್ದಂತೆ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತು. ಪಟಾಕಿ ಸಿಡಿಸಿ ಜನರು 2026ಕ್ಕೆ ಸ್ವಾಗತ ಕೋರಿದರು. ಮಂಗಳೂರಿನಲ್ಲಿ ಡಿಜೆ ಸಾಂಗ್‍ಗಳ ಜೊತೆಗೆ ಯಕ್ಷಗಾನದ ಹಾಡುಗಳಿಗೆ ನೃತ್ಯ ಮಾಡಿ ಹೊಸ ವರ್ಷವನ್ನು ಜನ ಸ್ವಾಗತಿಸಿದ್ದಾರೆ. ಮಂಗಳೂರಿನ ಕೆಲವೆಡೆ ಖಾಸಗಿಯಾಗಿ ಪಾರ್ಟಿಗಳು ನಡೆದಿವೆ. ಹೋಟೆಲ್‌, ಬಾರ್‌ಗಳಲ್ಲಿ ಮಾಮೂಲಿಗಿಂತ ಹೆಚ್ಚು

ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ : ಪೊಲೀಸರ ಕಣ್ಗಾವಲಿನ ನಡುವೆ ಮೋಜುಮಸ್ತಿ Read More »

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಾಖೆಯಲ್ಲಿ ವೈಕುಂಠ ಏಕಾದಶಿ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ರಿ. ಕರ್ನಾಟಕ ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಮಂಗಳೂರು ಇದರ ಕಳಿಯ ಗೇರುಕಟ್ಟೆ ಕ್ಷೀರಸಂಗಮ ಶಾಖೆಯಲ್ಲಿ ವೈಕುಂಠ ಏಕಾದಶಿಯ ಆಚರಣೆಯನ್ನು ಭಜನೆ, ವಿಷ್ಣು ನಾಮ ಸಂಕೀರ್ತನೆ ಮತ್ತು ವಿಷ್ಣು ನಮಸ್ಕಾರದ ಮೂಲಕ ಆಚರಿಸಲಾಯಿತು. ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ ಮಾತನಾಡಿ, ಭಗವತ್ ಪ್ರೀತಿ ಮತ್ತು ಭಗವತ್ ಪ್ರಾಪ್ತಿಗಾಗಿ ಮಾಡುವ ಸತ್ಕರ್ಮಗಳಿಂದ ಪಡೆಯುವ ಪುಣ್ಯ ವಿಶೇಷದಿಂದ ಭಗವಂತನ ಸಾನಿಧ್ಯವನ್ನು ಪಡೆಯಬಹುದು. ಸಮರ್ಪಣ ಭಾವದಿಂದ ಮಾಡುವ ಕರ್ಮಾಚರಣೆಯಿಂದ ಜ್ಞಾನವನ್ನು

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಾಖೆಯಲ್ಲಿ ವೈಕುಂಠ ಏಕಾದಶಿ ಆಚರಣೆ Read More »

error: Content is protected !!
Scroll to Top