ಕಾರವಾರ-ಗೋವಾ ನಡುವಿನ ಸೇತುವೆ ಕುಸಿತ | ಲಾರಿ ಸಮೇತ ಕೆಳಗೆ ಬಿದ್ದ ಚಾಲಕ

ಕಾರವಾರ: ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ 41 ವರ್ಷಗಳ ಹಳೆ ಸೇತುವೆ ಒಮ್ಮಿಂದ ಒಮ್ಮೆಲೆ ಕುಸಿದು ಬಿದ್ದ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿದ್ದ ಸೇತುವೆ ಕುಸಿದಿದೆ. ರಾಷ್ಟ್ರೀಯ ಹೆದ್ದಾರಿ 66ರ ನಿರ್ಮಾಣದ ವೇಳೆ ಒಂದೇ ಒಂದು ಹೊಸ ಸೇತುವೆ ನಿರ್ಮಾಣ ಮಾಡಲಾಗಿತ್ತು. ಇನ್ನೊಂದು ಮಾರ್ಗಕ್ಕೆ ಹಳೆ ಸೇತುವೆಯನ್ನೇ ಬಳಸಲಾಗುತ್ತಿತ್ತು. ಐಆರ್‍ ಬಿ ಹೊಸ ಸೇತುವೆ […]

ಕಾರವಾರ-ಗೋವಾ ನಡುವಿನ ಸೇತುವೆ ಕುಸಿತ | ಲಾರಿ ಸಮೇತ ಕೆಳಗೆ ಬಿದ್ದ ಚಾಲಕ Read More »

ಪಿಕಪ್ –ಸ್ಕೂಟಿ ಡಿಕ್ಕಿ : ಸ್ಕೂಟಿ ಸವಾರನಿಗೆ ಗಾಯ

ಪುತ್ತೂರು: ಪಿಕಪ್ ಮತ್ತು ಸ್ಕೂಟಿ ಡಿಕ್ಕಿ ಹೊಡೆದುಕೊಂಡ ಘಟನೆ ಇದೀಗ ನೆಹರೂನಗರದ ಮಾಸ್ಟರ್ ಪ್ಲಾನರಿ ಬಳಿ ನಡೆದಿದೆ. ಪಿಕಪ್ ಚಾಲಕ ಟರ್ನ್‍ ಮಾಡುವ ಸಂದರ್ಭ  ಸ್ಕೂಟಿ ಸವಾರ ಬಂದು ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಸ್ಕೂಟಿ ಸವಾರನಿಗೆ ಗಾಯವಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಇದೇಸ್ಥಳದಲ್ಲಿ ಹಲವಾರು ಆಕ್ಸಿಡೆಂಟ್ ಗಳು ಈ ಹಿಂದೆ ನಡೆದಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸುತ್ತಾ ಬಂದಿದ್ದಾರೆ. ಆದರೆ ಇದುವರೆಗೆ ಸಂಬಂಧ ಪಟ್ಟ ಇಲಾಖೆ ಯಾವುದೇ

ಪಿಕಪ್ –ಸ್ಕೂಟಿ ಡಿಕ್ಕಿ : ಸ್ಕೂಟಿ ಸವಾರನಿಗೆ ಗಾಯ Read More »

ಮಂಗಳೂರು ಹೋಂಸ್ಟೇ ದಾಳಿ ಪ್ರಕರಣ | ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಮಂಗಳೂರು: ದೇಶಾದ್ಯಂತ ಸುದ್ದಿಯಾಗಿದ್ದ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದು, ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣ ನಡೆದು 12 ವರ್ಷಗಳ ಬಳಿಕ ಈ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳು ದೋಷ ಮುಕ್ತರಾಗಿದ್ದಾರೆ ಎಂದು ಮಂಗಳೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ತೀರ್ಪು ನೀಡಿದ್ದಾರೆ. 2012ರ ಜುಲೈ 28ರಂದು ಮಂಗಳೂರಿನ ಪಡೀಲ್ ಬಳಿಯ ಮಾರ್ನಿಂಗ್ ಮಿಸ್ಟ್ ಹೋಂಸ್ಟೇ

ಮಂಗಳೂರು ಹೋಂಸ್ಟೇ ದಾಳಿ ಪ್ರಕರಣ | ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ Read More »

ಕಾಣೆಯಾದ ಯುವತಿ ಕಾರ್ಕಳದ ಯುವಕನ ಮನೆಯಲ್ಲಿ ಪತ್ತೆ

ಕಾರ್ಕಳ : ವಾರದ ಹಿಂದೆ ಮಂಗಳೂರಿನ ಬಿಜೈಯ ತನ್ನ ಮನೆಯಿಂದ ನಾಪತ್ತೆಯಾಗಿದ್ದ 18ರ ಯುವತಿ, ಉಡುಪಿ ಜಿಲ್ಲೆಯ ಕಾರ್ಕಳದ ಯುವಕನ ಮನೆಯಲ್ಲಿ ಪತ್ತೆಯಾಗಿದ್ದಾಳೆ .  ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಬರ್ಕೆ ಪೊಲೀಸರು ತಾಂತ್ರಿಕ ಸಾಕ್ಷ್ಯಗಳನ್ನು ಕಲೆ ಹಾಕಿ ಯುವತಿಯನ್ನು ಪತ್ತೆ ಹಚ್ಚಿದ್ದಾರೆ. ಜುಲೈ 30ರಂದು ಮಧ್ಯಾಹ್ನ ವಿದ್ಯಾರ್ಥಿನಿ ಕಲಿಸ್ತ ಫೆರಾವೋ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು . ಆಸುಪಾಸಿನ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಯುವತಿ ಆಟೋರಿಕ್ಷಾದಲ್ಲಿ ತೆರಳಿರುವುದು ಬೆಳಕಿಗೆ ಬಂದಿತ್ತು. ಬಳಿಕ ತನಿಖೆಯನ್ನು ಇನ್ನಷು ಚುರುಕುಗೊಳಿಸಿದ ಬರ್ಕೆ ಪೊಲೀಸರು, ಕಾಣೆಯಾದ

ಕಾಣೆಯಾದ ಯುವತಿ ಕಾರ್ಕಳದ ಯುವಕನ ಮನೆಯಲ್ಲಿ ಪತ್ತೆ Read More »

ಚಲಿಸುತ್ತಿದ್ದ ಬಸ್ ಗೆ ಬೆಂಕಿ : ಪ್ರಯಾಣಿಕರು ಅನಾಹುತದಿಂದ ಪಾರು  

ಶಿವಮೊಗ್ಗ : ಚಲಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಸಾಗರ ಪಟ್ಟಣದಲ್ಲಿ ನಡೆದಿದೆ. ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಕೆ.ಎಸ್.ಆ‌ರ್.ಟಿ.ಸಿ ಬಸ್ ಸಂಪೂರ್ಣ ಹಾನಿಯಾಗಿದೆ. ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ವಾಯುವ್ಯ ಸಾರಿಗೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಈ ಅವಘಡ ಸಂಭವಿಸಿದೆ. ಬಸ್ಸಿನಲ್ಲಿ ಒಟ್ಟು 12 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ವಾಯುವ್ಯ ಸಾರಿಗೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಸಿಬ್ಬಂದಿ ಎಚ್ಚೆತ್ತುಕೊಂಡಿದ್ದಾರೆ. ರಸ್ತೆ ಮಧ್ಯೆದಲ್ಲೇ ಬಸ್ ನಿಲ್ಲಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಚಲಿಸುತ್ತಿದ್ದ ಬಸ್ ಗೆ ಬೆಂಕಿ : ಪ್ರಯಾಣಿಕರು ಅನಾಹುತದಿಂದ ಪಾರು   Read More »

ಬಾಂಗ್ಲಾ ಹಿಂಸಾಚಾರ  : ಹಿಂದೂ ದೇವಸ್ಥಾನಗಳ ಮೇಲೆ  ಪುಂಡರು  ದಾಳಿ  

ಪ್ರಧಾನಿ ಶೇಖ್‌ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪುಂಡರು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿ ವಿಕೃತಿ ಮೆರೆದಿದ್ದಾರೆ. ಸೋಮವಾರ ನಡೆದ ಹಿಂಸಾಚಾರದಲ್ಲಿ 4 ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಹಿಂದೂ, ಬೌದ್ಧ, ಕ್ರಿಶ್ಚಿಯನ್ ಯೂನಿಟಿ ಕೌನ್ಸಿಲ್ ನಾಯಕಿ ಕಾಜೋಲ್ ದೇಬನಾಥ್ ಮಾತನಾಡಿ, ದೇಶಾದ್ಯಂತ ಕನಿಷ್ಠ 4 ಹಿಂದೂ ದೇವಾಲಯಗಳಿಗೆ ಹಾನಿಯಾಗಿದೆ ಎಂಬ ವರದಿಗಳು ಬಂದಿವೆ. ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿದ ನಂತರ ಉದ್ವಿಗ್ನ ಪರಿಸ್ಥಿತಿಯ

ಬಾಂಗ್ಲಾ ಹಿಂಸಾಚಾರ  : ಹಿಂದೂ ದೇವಸ್ಥಾನಗಳ ಮೇಲೆ  ಪುಂಡರು  ದಾಳಿ   Read More »

ಕೆರೆಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ

ಪುತ್ತೂರು: ಆಟೋ ಚಾಲಕರೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ  ಘಟನೆ ಮಂಗಳವಾರ ಮಧ್ಯಾಹ್ನ ಸಂಪ್ಯದಲ್ಲಿ ನಡೆದಿದೆ. ಸಂಪ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆಟೋ ಚಾಲಕ ಮಹಮ್ಮದ್ (48) ಆತ್ಮಹತ್ಯೆ ಮಾಡಿಕೊಂಡವರು. ಮೂಲತಃ ಪುರುಷರಕಟ್ಟೆಯ ಪಾಪೆತ್ತಡ್ಕ ನಿವಾಸಿಯಾಗಿರುವ ಮಹಮ್ಮದ್ ಕಳೆದ ಕೆಲ ಸಮಯಗಳಿಂದ ಸಂಪ್ಯದಲ್ಲಿ ವಾಸ್ತವ್ಯ ಹೊಂದಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ.

ಕೆರೆಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ Read More »

ವಕ್ಫ್ ಆಸ್ತಿಯ ಕುರಿತು ಕೇಂದ್ರದ ಹೊಸ ಕಾಯ್ದೆ

ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ  ವಕ್ಫ್ ಕಾಯಿದೆ 1995ಕ್ಕೆ ತಿದ್ದುಪಡಿ ತಂದು,  ಸಂಸತ್ತಿನಲ್ಲಿ ಮಂಡಿಸಲು ಸನ್ನದ್ಧವಾಗಿದೆ. ಭೂಮಿಯ ಹಕ್ಕು ಪಡೆಯಲು ವಕ್ಫ್ ಮಂಡಳಿಗಳ  ಅಧಿಕಾರವನ್ನು ಸೀಮಿತಗೊಳಿಸುವುದು, ಮಂಡಳಿಯ ಸಂಯೋಜನೆಗಳನ್ನು ಪುನರ್ರಚಿಸುವುದು ಮತ್ತು ಸರಿಯಾದ ಪರಿಶೀಲನಾ ಪ್ರಕ್ರಿಯೆಗಳನ್ನು ಖಚಿತಪಡಿಸಿಕೊಳ್ಳುವುದು ಸೇರಿ ಕಾಯಿದೆಗೆ ಸಂಬಂಧಿಸಿದಂತೆ ಸೆಕ್ಷನ್ 40ಕ್ಕೆ ಬದಲಾವಣೆಗಳನ್ನು ಪ್ರಸ್ತಾಪಿಸಿದೆ. ವಿವಾದಿತ ಭೂಮಿ ಹಕ್ಕುಗಳಂತಹ ಸಮಸ್ಯೆಗಳನ್ನು ಪರಿಹರಿಸುವುದು, ವಕ್ಫ್ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯವನ್ನು ಒದಗಿಸುವುದು, ವಕ್ಫ್ ಆಸ್ತಿಗಳ ದುರ್ಬಳಕೆ ತಡೆಯೋದು ಕೇಂದ್ರ ಸರ್ಕಾರದ ಹೊಸ ಕಾನೂನಿನ ಉದ್ದೇಶವಾಗಿದೆ. 1995ರಲ್ಲಿ

ವಕ್ಫ್ ಆಸ್ತಿಯ ಕುರಿತು ಕೇಂದ್ರದ ಹೊಸ ಕಾಯ್ದೆ Read More »

ಪ್ರಾಣದ ಹಂಗು ತೊರೆದು ಕಾರ್ಯಾಚರಣೆಗಿಳಿಯುವ ಎನ್‌ಡಿಆರ್‌ಎಫ್‌ನ ಸಾಹಸದ ಕಥೆ!

ಕ್ರೋಧಿ ನಾಮ ಸಂವತ್ಸರದ 2024ನೇ ವರ್ಷ ಜಲಕಂಟಕ ಜಗದ್ವ್ಯಾಪಿ ಆಗಲಿದೆ ಎಂದು ಕೋಡಿ ಶ್ರೀಗಳು ಹೇಳಿದ್ದು ಆಗಾಗ ನೆನಪಾಗುತ್ತಿದೆ. ನಮ್ಮ ಸುತ್ತುಮುತ್ತಲ ಪ್ರದೇಶಗಳಲ್ಲಿ ಸಂಭವಿಸುತ್ತಿರುವ ಜಲ ಸಂಬಂಧಿ ದುರಂತಗಳು ತೀವ್ರ ಆತಂಕ ತಂದೊಡ್ಡುತ್ತಿದೆ. ಈ ಮಧ್ಯೆ ಪ್ರಳಯ ಪೀಡಿತರಿಗೆ ಆಶಾಕಿರಣವಾಗಿರುವುದು ಮತ್ತು ತಂಡಗಳು. ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗ ಇವರೇ ಒಳನಾಡಿನ ಆರ್ಮಿ! ಇವರ ಪಂಚ ಲಕ್ಷಣಗಳು ಈ ತಂಡಗಳು ಐದು ನೆಲೆಗಳಲ್ಲಿ ಕಾರ್ಯಾಚರಿಸುತ್ತವೆ. 1) ತಡೆಯುವಿಕೆ ಪ್ರಾಣಹಾನಿಯಂತಹ ದುರಂತಗಳು ಆಗದಂತೆ ನೋಡಿಕೊಳ್ಳಲು ಮುನ್ನೆಚ್ಚರಿಕೆ ನೀಡಿ ಜನ-ಜಾನುವಾರುಗಳನ್ನು ತೆರವು

ಪ್ರಾಣದ ಹಂಗು ತೊರೆದು ಕಾರ್ಯಾಚರಣೆಗಿಳಿಯುವ ಎನ್‌ಡಿಆರ್‌ಎಫ್‌ನ ಸಾಹಸದ ಕಥೆ! Read More »

ಲಿಟ್ಲ್ ಫ್ಲವರ್ ಶಾಲೆಯಲ್ಲಿ ವನ ಮಹೋತ್ಸವ ಆಚರಣೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವನ ಮಹೋತ್ಸವದ ಅಗತ್ಯತೆ, ಪ್ರಕೃತಿಯ ಆಂತರ್ಯದ ಸತ್ವವನ್ನು ನಾವು ತಿಳಿದು ಕೊಳ್ಳುವ ಅನಿವಾರ್ಯತೆಯ ಕುರಿತು ಬೆಳಕು ಚೆಲ್ಲಿದರು. ವೇದಿಕೆಯಲ್ಲಿ ಸ್ಕೌಟ್ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್, ಗೈಡ್  ಶಿಕ್ಷಕಿಯರಾದ ವಿಲ್ಮಾ ಫೆರ್ನಾಂಡಿಸ್, ನಳಿನಾಕ್ಷಿ, ಸ್ಕೌಟ್ ಶಿಕ್ಷಕಿ

ಲಿಟ್ಲ್ ಫ್ಲವರ್ ಶಾಲೆಯಲ್ಲಿ ವನ ಮಹೋತ್ಸವ ಆಚರಣೆ Read More »

error: Content is protected !!
Scroll to Top