ಬರೋಬ್ಬರಿ 52 ವರ್ಷಗಳ ಬಳಿಕ ಹಾಕಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಭಾರತ | ಐತಿಹಾಸಿಕ ಸಾಧನೆ

ಬರೋಬ್ಬರಿ 52 ವರ್ಷಗಳ ಬಳಿಕ ಪ್ಯಾರಿಸ್ ಒಲಿಂಪಿಕ್ಸ್ 2024ರ ಪುರುಷರ ಹಾಕಿ ಪೂಲ್ ಬಿ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 3-2 ಗೋಲುಗಳಿಂದ ಸೋಲಿಸುವ ಮೂಲಕ ಭಾರತದ ಹಾಕಿ ತಂಡವು ಐತಿಹಾಸಿಕ ಸಾಧನೆ ಮಾಡಿದೆ. 1972ರ ಒಲಿಂಪಿಕ್ಸ್ ನಂತರ ಭಾರತವು ಹಾಕಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿದ್ದು ಇದೇ ಮೊದಲು. ಕಳೆದ ಬಾರಿ ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡವು ರಜತ ಪದಕ ಜಯಿಸಿತ್ತು. ಭಾರತ ಪರ ಅಭಿಷೇಕ್ ಮತ್ತು ಹರ್ಮನ್‌ಪ್ರೀತ್ ಸಿಂಗ್ (2) ಗೋಲು ಗಳಿಸಿದರು. ಥಾಮಸ್ ಕ್ರೇಗ್ ಮತ್ತು […]

ಬರೋಬ್ಬರಿ 52 ವರ್ಷಗಳ ಬಳಿಕ ಹಾಕಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಭಾರತ | ಐತಿಹಾಸಿಕ ಸಾಧನೆ Read More »

ವಿದ್ಯಾಭಾರತಿ ಯೋಗ : ವಿವೇಕಾನಂದ  ಕನ್ನಡ ಮಾಧ್ಯಮ  ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ವತಿಯಿಂದ ಕಡಬ ಸರಸ್ವತಿ ವಿದ್ಯಾಲಯದಲ್ಲಿ ನಡೆದ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಕಿಶೋರ ವಿಭಾಗ ಮತ್ತು ಬಾಲವರ್ಗ ಈ ಎರಡೂ  ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲವರ್ಗದ ಬಾಲಕರ ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯೊಂದಿಗೆ ವೈಯಕ್ತಿಕ ವಿಭಾಗದಲ್ಲಿ ನಿಶಾಂತ್ ಪ್ರಥಮ, ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಹುಲ್  ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ ಶೃಜನ್ ಜೆ ರೈ ದ್ವಿತೀಯ, ಸ್ಕಂದ

ವಿದ್ಯಾಭಾರತಿ ಯೋಗ : ವಿವೇಕಾನಂದ  ಕನ್ನಡ ಮಾಧ್ಯಮ  ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ಅನಾರೋಗ್ಯದಿಂದ ಕಾಲೇಜು ವಿದ್ಯಾರ್ಥಿ ಮೃತ್ಯು

ಉಪ್ಪಿನಂಗಡಿ: ಅನಾರೋಗ್ಯಕ್ಕೀಡಾಗಿ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಉಪ್ಪಿನಂಗಡಿಯ ಸರಕಾರಿ ಪ.ಪೂ.ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮುಹಮ್ಮದ್ ಸಿರಾಜುದ್ದೀನ್ (17) ಮೃತಪಟ್ಟ ವಿದ್ಯಾರ್ಥಿ. ಕೊಯಿಲದ ಗಂಡಿಬಾಗಿಲು ನಿವಾಸಿ ಸಿರಾಜುದ್ದೀನ್ ಕಾಲೇಜಿಗೆಂದು ಬೆಳಗ್ಗೆ ತನ್ನ ಸ್ನೇಹಿತರೊಂದಿಗೆ ಬಂದಿದ್ದಾನೆ. ಕಾಲೇಜಿನ ದಾರಿ ಮಧ್ಯೆ ಬಿ.ಪಿ. ಲೋ ಸಮಸ್ಯೆಯಿಂದ ತಲೆ ತಿರುಗಿ ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ ಜೊತೆಗಿದ್ದವರು ಸಿರಾಜುದ್ದೀನ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.  ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಿರಾಜುದ್ದೀನ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಅನಾರೋಗ್ಯದಿಂದ ಕಾಲೇಜು ವಿದ್ಯಾರ್ಥಿ ಮೃತ್ಯು Read More »

ಸರ್ವೆ ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟದಿಂದ ಆಟಿ ಆಚರಣೆ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ

ಸರ್ವೆ: ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟ ಸರ್ವೆ, ಒಕ್ಕಲಿಗ ಗೌಡ ಸೇವಾ ಸಂಘ, ಯುವ ಘಟಕ ,ಮಹಿಳಾ ಘಟಕದ ಸಹಯೋಗದಲ್ಲಿ  ಆಟಿ ಆಚರಣೆ, ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ ಭಕ್ತಕೋಡಿ ಶ್ರೀರಕ್ಷಾ ಸಭಾಭವನದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕೊಂಡಾಡಿಕೊಪ್ಪ ಶಾಲಾ ಮುಖ್ಯ ಶಿಕ್ಷಕ ಜಯಂತ್ ವೈ, ತುಳುನಾಡಿನ ಆಟಿ ತಿಂಗಳ ಆಚರಣೆಗಳ ಬಗ್ಗೆ ಹಾಡಿನ ಮೂಲಕ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಸರ್ವೆ ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ

ಸರ್ವೆ ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟದಿಂದ ಆಟಿ ಆಚರಣೆ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣೆ Read More »

ವಯನಾಡು ದುರಂತವನ್ನು “ರಾಷ್ಟ್ರೀಯ ವಿಪತ್ತು’’ಎಂದು ಘೋಷಿಸಲು ಕೇಂದ್ರ ಸರಕಾರ ನಿರಾಕರಣೆ

ವಯನಾಡು : ಜಿಲ್ಲೆಯಾದ್ಯಂತ ಸಂಭವಿಸಿರುವ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 350 ರ ಗಡಿ ದಾಟಿದ್ದು, ಈ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಇದರ ಬೆನ್ನಲ್ಲೇ ಮೇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ‘ವಿಪತ್ತು ಪೀಡಿತ ಪ್ರದೇಶ’ ಎಂದು ಕೇರಳ ರಾಜ್ಯ ಸರ್ಕಾರ ಶುಕ್ರವಾರ ಘೋಷಿಸಿ ಅದೇಶ ಹೊರಡಿಸಿದೆ. ಈ ದುರಂತವನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸುವಂತೆ ಕೇರಳ ರಾಜ್ಯ ಸಚಿವ ಸಂಪುಟ ಈಗಾಗಲೇ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಆದರೆ ಕಾನೂನಾತ್ಮಕ ಸಮಸ್ಯೆಗಳಿರುವ

ವಯನಾಡು ದುರಂತವನ್ನು “ರಾಷ್ಟ್ರೀಯ ವಿಪತ್ತು’’ಎಂದು ಘೋಷಿಸಲು ಕೇಂದ್ರ ಸರಕಾರ ನಿರಾಕರಣೆ Read More »

ಮುಡಾ ಹಗರಣ : ಮೈತ್ರಿ ನಾಯಕರಿಂದ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ಮೈಸೂರು ಚಲೋ ಆರಂಭಿಸಿದ್ದಾರೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ಕೆಂಗೇರಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು. ಇಂದಿನಿಂದ ಆಗಸ್ಟ್ 10 ರವರೆಗೆ ಏಳು ದಿನಗಳ ಕಾಲ ಒಟ್ಟು 124 ಕಿಮೀವರೆಗೆ ಪಾದಯಾತ್ರೆ ನಡೆದು ಮುಡಾ ಕಚೇರಿಯಲ್ಲಿ ಕೊನೆಯಾಗಲಿದೆ. ಕೊನೆಯ ದಿನದಂದು ಮೈಸೂರಿನಲ್ಲಿ ನಡೆಯುವ ಸಮಾರೋಪ

ಮುಡಾ ಹಗರಣ : ಮೈತ್ರಿ ನಾಯಕರಿಂದ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ Read More »

ಮ್ಯಾಕ್ಸ್ ಲೈಫ್‍ ಇನ್ಸೂರೆನ್ಸ್ ನಿಂದ ಕುದ್ಮಾರಿನ ರಾಶಿ ಕೆ.ಸಿ.ಯವರಿಗೆ ಕಲಾರತ್ನ ಪ್ರಶಸ್ತಿ

ಪುತ್ತೂರು: ಮ್ಯಾಕ್ಸ್ ಲೈಫ್‍ ಇನ್ಸೂರೆನ್ಸ್ ವತಿಯಿಂದ ಇಂಡಿಯಾ ಬುಕ್ ಆಫ್‍ ರೆಕಾರ್ಡ್‍ ನಲ್ಲಿ ದಾಖಲಾದ ಕುದ್ಮಾರಿನ ರಾಶಿ ಕೆ.ಸಿ. ಅವರಿಗೆ ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಶಿ ಕೆ.ಸಿ. ಅವರು 1 ಗಂಟೆ 22 ಸೆಕೆಂಡುಗಳಲ್ಲಿ ಯಾವುದೇ  ವಿರಾಮ ಇಲ್ಲದೆ ನಿರಂತರ 69 ಬಾರಿ ರಾಷ್ಟ್ರಗೀತೆಯನ್ನು ನಿರರ್ಗಳವಾಗಿ ಹಾಡುವ ಮೂಲಕ ಲಿಮ್ಕಾ ಬುಕ್ ಆಫ್‍ ರೆಕಾರ್ಡ್‍ ಸಾಧನೆ ಮಾಡಿದ್ದಾರೆ. ಈ ಸಾಧನೆಯನ್ನು ಗುರುತಿಸಿ ಮ್ಯಾಕ್ಸ್ ಲೈಫ್‍ ಇನ್ಸೂರೆನ್ಸ್ ನಿಂದ ಜಿಲ್ಲಾಮಟ್ಟದ ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮ್ಯಾಕ್ಸ್ ಲೈಫ್‍ ಇನ್ಸೂರೆನ್ಸ್ ನಿಂದ ಕುದ್ಮಾರಿನ ರಾಶಿ ಕೆ.ಸಿ.ಯವರಿಗೆ ಕಲಾರತ್ನ ಪ್ರಶಸ್ತಿ Read More »

ವಯನಾಡು ಗುಡ್ಡ ಕುಸಿತ | ಕರ್ನಾಟಕದ 8 ಜನರ ಮೃತದೇಹ ಪತ್ತೆ

ಕೇರಳ :   ವಯನಾಡು ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ 9 ಜನರ ಪೈಕಿ 8 ಜನರ ಶವ ಪತ್ತೆಯಾಗಿದೆ. ದುರಂತದಲ್ಲಿ ನಾಪತ್ತೆಯಾಗಿದ್ದ ಮೈಸೂರು ಮೂಲದ ಗುರುಮಲ್ಲನ್ (60), ಸಾವಿತ್ರಿ (54), ಶಿವಣ್ಣ(50), ಅಪ್ಪಣ್ಣ (39), ಅಶ್ವಿನಿ ( 13 ), ಜೀತು (11), ದಿವ್ಯಾ(35),  ಶ್ರೇಯಾ(19) ಎಂಬುವರ ಮೃತದೇಹ ಪತ್ತೆ ಆಗಿದೆ. ಮೃತರ ಸಾವಿನ ಬಗ್ಗೆ ಗುಂಡ್ಲುಪೇಟೆ ತಹಸೀಲ್ದಾ‌ರ್ ರಮೇಶ್‌ ಬಾಬು ಖಚಿತ ಪಡಿಸಿದ್ದಾರೆ. ಸುಮಾರು 60 ವರ್ಷಗಳ ಹಿಂದೆ ಕೇರಳಕ್ಕೆ ಆಗಮಿಸಿದ್ದ ಮಾದೇವಿ

ವಯನಾಡು ಗುಡ್ಡ ಕುಸಿತ | ಕರ್ನಾಟಕದ 8 ಜನರ ಮೃತದೇಹ ಪತ್ತೆ Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ, ಎಂಸಿಎ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಪುತ್ತೂರು : ಪ್ರಸಕ್ತ ಸನ್ನಿವೇಶದಲ್ಲಿ ಕಾರ್ಯಕ್ಷೇತ್ರ ನಮ್ಮತ್ತ ಎಸೆಯುವ ಸವಾಲುಗಳನ್ನು ಎದುರಿಸಲು ನಮಗೆ ಅಪಾರವಾದ ಶಕ್ತಿ ಹಾಗೂ ಅಗಾಧವಾದ ತಾಳ್ಮೆ ಬೇಕಾಗುತ್ತದೆ. ಇದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬೆಳೆಯಬಹುದು ಎಂದು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ನಡೆದ ಕಾಲೇಜಿನ ಎಂಬಿಎ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಮಾತಾಡಿದರು.

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ, ಎಂಸಿಎ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ Read More »

ಜಾತಿ-ಧರ್ಮ-ಮತ ಬಿಟ್ಟು ಜನಸಂಖ್ಯಾ ಸ್ಪೋಟಕಕ್ಕೆ ನಿಯಂತ್ರಣ ಹಾಕಬೇಕಾದ ಅವಶ್ಯಕತೆಯಿದೆ | ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುತ್ತೂರು ಆರೋಗ್ಯಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಪುತ್ತೂರು ಪುರಭವನದಲ್ಲಿ ಶನಿವಾರ ನಡೆಯಿತು. ಶಾಸಕ ಅಶೋಕ್‍ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜನ ಸಂಖ್ಯೆ ಕುರಿತು ಗಂಭೀರವಾಗಿ ಪರಿಗಣಿಸದಿರುವುದು ಅಪಾಯ. ಈ ರೀತಿ ಜನಸಂಖ್ಯೆಯನ್ನು ಕಂಟ್ರೋಲ್ ಮಾಡದಿದ್ದರೆ ದೇಶದ ಆರ್ಥಿಕ ಪರಿಸ್ಥಿತಿ ಯಾವ ಮಟ್ಟಕ್ಕೆ ಹೋದೀತು ಎಂಬುದನ್ನು ತಿಳಿಕೊಳ್ಳಬೇಕಾದ  ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯ ಪ್ರಾಮುಖ್ಯತೆಯನ್ನು

ಜಾತಿ-ಧರ್ಮ-ಮತ ಬಿಟ್ಟು ಜನಸಂಖ್ಯಾ ಸ್ಪೋಟಕಕ್ಕೆ ನಿಯಂತ್ರಣ ಹಾಕಬೇಕಾದ ಅವಶ್ಯಕತೆಯಿದೆ | ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ Read More »

error: Content is protected !!
Scroll to Top