ಉಪ್ಪಿನಂಗಡಿ ಸಂಗಮಕ್ಕೆ ಕ್ಷಣಗಣನೆ | ಸಂಗಮ ಕ್ಷೇತ್ರದಲ್ಲಿ ಭಾರೀ ಜನಸ್ತೋಮ

ಉಪ್ಪಿನಂಗಡಿ: ಸಂಗಮ ಕ್ಷೇತ್ರವೆಂದೇ ಪ್ರಸಿದ್ಧಿಯಾದ ಉಪ್ಪಿನಂಗಡಿ ನೇತ್ರಾವತಿ ಹಾಗೂ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸಂಗಮಕ್ಕೆ ಇನ್ನೇನು ಕ್ಷಣಗಣನೆ ಉಂಟಾಗಿದೆ. ಭಾರೀ ಸಂಖ್ಯೆಯಲ್ಲಿ ಜನಸಮೂಹ ಇಲ್ಲಿ ಸೇರಿದೆ. ಇತ್ತ ಸುಬ್ರಹ್ಮಣ್ಯ ಹಾಗೂ ಅತ್ತ ಧರ್ಮಸ್ಥಳದಿಂದ ಹರಿದು ಬರುತ್ತಿರುವ ಮಳೆಯ ನೀರಿನಿಂದಾಗಿ ಉಪ್ಪಿನಂಗಡಿ ನೇತ್ರಾವತಿ ಹಾಗೂ ಕುಮಾರಧಾರ ನದಿಗಳು ಉಕ್ಕಿ ಹರಿಯುತ್ತಿದೆ. ಪರಿಣಾಮ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಸುತ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಉಪ್ಪಿನಂಗಡಿಗೆ ಭೇಟಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು ಈ ಸಂದರ್ಭದಲ್ಲಿ […]

ಉಪ್ಪಿನಂಗಡಿ ಸಂಗಮಕ್ಕೆ ಕ್ಷಣಗಣನೆ | ಸಂಗಮ ಕ್ಷೇತ್ರದಲ್ಲಿ ಭಾರೀ ಜನಸ್ತೋಮ Read More »

ಭಾರೀ ಮಳೆ ಎಪಿಎಂಸಿ ರಸ್ತೆ ಮುಳುಗಡೆ

ಪುತ್ತೂರು : ಭಾರೀ ಮಳೆಗೆ ಎಪಿಎಂಸಿ ರಸ್ತೆ ನದಿಯಂತಾಗಿದ್ದು, ಪಕ್ಕದ ಆದರ್ಶ ಆಸ್ಪತ್ರೆಯ ಮೆಟ್ಟಿಲುವರೆಗೆ ನೀರು ತಲುಪಿದೆ. ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಮುಂಭಾಗ ಹಾಗೂ ಬ್ರಿಡ್ಜ್ ಸಮೀಪ ರಸ್ತೆಯಲ್ಲಿ ನೀರು ತುಂಬಿದೆ. ಸರಿಯಾಗಿ ರಸ್ತೆ ಕಾಣದೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಂಜೆವರೆಗೆ ಈ ರೀತಿ ಮಳೆ ಮುಂದುವರಿದರೆ ಆಸ್ಪತ್ರೆಯೊಳಗೂ ನೀರು ನುಗ್ಗುವ ಸಾಧ್ಯತೆಯಿದೆ.

ಭಾರೀ ಮಳೆ ಎಪಿಎಂಸಿ ರಸ್ತೆ ಮುಳುಗಡೆ Read More »

ಶೇಖಮಲೆಯಲ್ಲಿ ಗುಡ್ಡ ಕುಸಿದು ಪುತ್ತೂರು – ಸುಳ್ಯ ರಾಷ್ಟ್ರೀಯ ಹೆದ್ದಾರಿ ಬಂದ್

ಪುತ್ತೂರು :  ಮೈಸೂರು – ಮಾಣಿ ಹೆದ್ದಾರಿಯ ಶೇಖಮಲೆ ಶಾಲೆಯ ಬಳಿ ಗುಡ್ಡ ಕುಸಿತ ಸಂಭವಿಸಿದೆ. ಭಾರೀ ಗುಡ್ಡ ಕುಸಿದ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ತಡೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ 4 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು, 2 ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದೆ. ಪುತ್ತೂರು ಸುಳ್ಯ ರಸ್ತೆ ಸಂಚಾರ ಬಂದ್ ಆಗಿದೆ.

ಶೇಖಮಲೆಯಲ್ಲಿ ಗುಡ್ಡ ಕುಸಿದು ಪುತ್ತೂರು – ಸುಳ್ಯ ರಾಷ್ಟ್ರೀಯ ಹೆದ್ದಾರಿ ಬಂದ್ Read More »

ಗುಡ್ಡ ಕುಸಿದ : ಅಜಿಲಮೊಗರು- ಸರಳಿಕಟ್ಟೆ – ಉಪ್ಪಿನಂಗಡಿ ಸಂಚಾರ ಬಂದ್

ಉಪ್ಪಿನಂಗಡಿ :  ಭಾರೀ ಗುಡ್ಡ ಕುಸಿದ ಪರಿಣಾಮ ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಅಜಿಲಮೊಗರು ಕಡಿತಗೊಂಡಿದೆ. ಸರಳಿಕಟ್ಟೆ – ಉಪ್ಪಿನಂಗಡಿ ಸಂಪರ್ಕ ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ. ಪಂಜುಕ್ಕು ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್‌ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ. ಗುಡ್ಡ ಕುಸಿತದಿಂದ ವಿದ್ಯುತ್

ಗುಡ್ಡ ಕುಸಿದ : ಅಜಿಲಮೊಗರು- ಸರಳಿಕಟ್ಟೆ – ಉಪ್ಪಿನಂಗಡಿ ಸಂಚಾರ ಬಂದ್ Read More »

ಡ್ರಗ್ಸ್ ಜಾಲಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕಾಗಿದೆ | ಲೋಕಸಭೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಪ್ರಸ್ತಾಪ

ನವದೆಹಲಿ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾದಕದ್ರವ್ಯ ವ್ಯಸನೆ ಮತ್ತು ಮಾರಾಟದ ಚಟುವಟಿಗೆಗಳ ಬಗ್ಗೆ ಸದನದ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾದರು. ಪ್ರತಿ ತಿಂಗಳ ಮಾಧ್ಯಮಗಳ ಹೆಡ್‌ಲೈನ್‌ಗಳನ್ನು ನೋಡಿದರೆ, ನಗರದಲ್ಲಿ ಡ್ರಗ್ಸ್‌ನ ಅತಿರೇಕದ ಚಟುವಟಿಕೆಗಳನ್ನು ಸ್ಪಷ್ಟವಾಗಿ ಗಮನಿಸಬಹುದು. ಮಂಗಳೂರು ನಗರವು ವಿವಿಧ ಉನ್ನತ ಶಿಕ್ಷಣ ಸಂಸ್ಥೆಗಳ ಕೇಂದ್ರವಾಗಿರುವುದರಿಂದ ದೇಶದಾದ್ಯಂತದ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಮಾದಕದ್ರವ್ಯಗಳ ವ್ಯಾಪಾರಕ್ಕೆ ಹೆಚ್ಚಿನ ಅವಕಾಶಗಳು ಇದೆ ಎಂಬುವುದು ಅಲ್ಲಗಳೆಯಲಾಗದ ವಿಷಯ

ಡ್ರಗ್ಸ್ ಜಾಲಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕಾಗಿದೆ | ಲೋಕಸಭೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಪ್ರಸ್ತಾಪ Read More »

ಕನ್ನಡ ಸಾಹಿತ್ಯ ಪರಿಷತ್‍ ನಿಂದ ಮುಂಡೂರು ಗ್ರಾಮ ಸಾಹಿತ್ಯ ಸಂಭ್ರಮ 15ನೇ ಸರಣಿ ಕಾರ್ಯಕ್ರಮ

ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ ಮುಂಡೂರು ಗ್ರಾಮ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಹಕಾರದಲ್ಲಿ, ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ  ಮಿತ್ರಂಪಾಡಿ ಜಯರಾಮ ರೈ ಅಬುದಾಬಿಯವರ ಪೋಷಕತ್ವದಲ್ಲಿ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ಗ್ರಾಮ ಸಾಹಿತ್ಯ ಸಂಭ್ರಮದ 15ನೇ ಕಾರ್ಯಕ್ರಮ ಮುಂಡೂರು ಪ್ರಾ. ಕೃ. ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಮೊದಲು ವೈಭವದ ಮೆರವಣಿಗೆಗೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳ ಆಕರ್ಷಕ  ಬ್ಯಾಂಡ್ ಸೆಟ್

ಕನ್ನಡ ಸಾಹಿತ್ಯ ಪರಿಷತ್‍ ನಿಂದ ಮುಂಡೂರು ಗ್ರಾಮ ಸಾಹಿತ್ಯ ಸಂಭ್ರಮ 15ನೇ ಸರಣಿ ಕಾರ್ಯಕ್ರಮ Read More »

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘಕ್ಕೆ 50ನೇ ವರ್ಷ : ಕವಚದಾನ- ಕರ್ಣ ವಿವಾಹ ತಾಳಮದ್ದಳೆ

ಉಪ್ಪಿನಂಗಡಿ:  ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯ 38ನೇ ಕಾರ್ಯಕ್ರಮವಾಗಿ ‘ಕವಚದಾನ -ಕರ್ಣ ವಿವಾಹ’ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ನಿತೀಶ್ ಕುಮಾರ್ ವೈ ,ಸುರೇಶ್ ರಾವ್. ಬಿ ಹಿಮ್ಮೇಳದಲ್ಲಿ  ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ ,ಪ್ರಚೇತ್ ಆಳ್ವ ಸಹಕರಿಸಿದರು. ಅರ್ಥಧಾರಿಗಳಾಗಿ ದಿವಾಕರ ಆಚಾರ್ಯ ಗೇರುಕಟ್ಟೆ,ಶ್ರೀಧರ ಎಸ್.ಪಿ ಸುರತ್ಕಲ್(ಕರ್ಣ) ಮಹಾಲಿಂಗೇಶ್ವರ ಭಟ್ ಪೆರಿಯಡ್ಕ(ಮಂತ್ರಿ) ಹರೀಶ್ ಆಚಾರ್ಯ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘಕ್ಕೆ 50ನೇ ವರ್ಷ : ಕವಚದಾನ- ಕರ್ಣ ವಿವಾಹ ತಾಳಮದ್ದಳೆ Read More »

ಕೇರಳದ ವಯನಾಡ್‍ ನಲ್ಲಿ ಭಾರೀ ಭೂಕುಸಿತ

ವಯನಾಡ್: ಭಾರೀ ಭೂಕುಸಿತ ಸಂಭವಿಸಿದ ಪರಿಣಾಮ ಹಲವಾರು ಮಂದಿ ಸಿಲುಕಿರುವ ಘಟನೆ ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ನಡೆದಿದೆ. ಹಲವಾರು ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಮುಂಜಾನೆ ಭಾರಿ ಭೂಕುಸಿತ ಸಂಭವಿಸಿದ್ದು, ವರದಿಗಳ ಪ್ರಕಾರ, ನೂರಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ಮತ್ತು ಎನ್ಸಿಆರ್ಎಫ್ ತಂಡಗಳನ್ನು ಪೀಡಿತ ಪ್ರದೇಶಕ್ಕೆ ನಿಯೋಜಿಸಲಾಗಿದೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಮತ್ತೊಂದು ಎನ್ಸಿಆರ್‌ಎಫ್ ತಂಡವು ವಯನಾಡಿಗೆ ತೆರಳುತ್ತಿದ್ದು. ಹೆಚ್ಚುವರಿಯಾಗಿ ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು

ಕೇರಳದ ವಯನಾಡ್‍ ನಲ್ಲಿ ಭಾರೀ ಭೂಕುಸಿತ Read More »

ಜಿಲ್ಲಾಮಟ್ಟದ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಪುತ್ತೂರು: ಮಂಗಳೂರು ಶಾರದಾ ವಿದ್ಯಾಲಯದ ವತಿಯಿಂದ ನಡೆದ ’ಶಾರದಾ ಮಹೋತ್ಸವ’ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ ಲಭಿಸಿದೆ. ಶಾಲಾ ವಿದ್ಯಾರ್ಥಿ ಅದ್ವಿತ್.ಜಿ ಬಾಲವರ್ಗದ ಚಿತ್ರಕಲಾ ಸ್ಪರ್ಧೆಯಲ್ಲಿ – ದ್ವಿತೀಯ ಸ್ಥಾನ ಮತ್ತು ಶ್ರೀರಕ್ಷಾ ಕಿಶೋರವರ್ಗದ ಗೀತಕಂಠಪಾಠ ಸ್ಪರ್ಧೆಯಲ್ಲಿ –  ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

ಜಿಲ್ಲಾಮಟ್ಟದ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ Read More »

ಉತ್ತರ ಕನ್ನಡದ ಐದು ಮಂದಿ ಪಿಎಸ್‍ ಐಗಳು ದಕ್ಷಿಣ ಕನ್ನಡಕ್ಕೆ ವರ್ಗಾವಣೆ

ಮಂಗಳೂರು: ಉತ್ತರ ಕನ್ನಡದಿಂದ ಐದು ಮಂದಿ ಪಿಎಸ್‍ ಐಗಳನ್ನು ದಕ್ಷಿಣ ಕನ್ನಡಕ್ಕೆ ವರ್ಗಾವಣೆ ಮಾಡಲಾಗಿದೆ. ಉತ್ತರಕನ್ನಡದಿಂದ ಗೋಪಾಲ ಎನ್. ನೆಗಳೂರು ಬಂಟ್ವಾಳ ನಗರ ಠಾಣೆಗೆ, ದುರ್ಗಪ್ಪ ಹೆಚ್ ಕಲಘಟಗಿ ಬಂಟ್ವಾಳ ನಗರ ಠಾಣೆಗೆ, ತಿಮ್ಮಪ್ಪ ಎಸ್ ಬೆಡುಮನೆ ಬೆಳ್ಳಾರೆ ಠಾಣೆಗೆ, ಪ್ರಕಾಶ್ ಜಿ ಕಟ್ಟಿ ಉಪ್ಪಿನಂಗಡಿ ಠಾಣೆಗೆ (ಸಂಚಾರ ), ಅಶೋಕ್ ಡಿ ತಳದಪ್ಪನವರ್ ವಿಟ್ಲ ಠಾಣೆಗೆ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಲಾಗಿದೆ. ಪ್ರಮುಖವಾಗಿ ಹಲವು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಪಿ ಎಸ್ ಐ ಗಳನ್ನು ಪದೋನ್ನತಿ ಹೊಂದಿ

ಉತ್ತರ ಕನ್ನಡದ ಐದು ಮಂದಿ ಪಿಎಸ್‍ ಐಗಳು ದಕ್ಷಿಣ ಕನ್ನಡಕ್ಕೆ ವರ್ಗಾವಣೆ Read More »

error: Content is protected !!
Scroll to Top