ಕೆರೆಗೆ ಸ್ನಾನಕ್ಕೆ ಇಳಿದ ವ್ಯಕ್ತಿ ನಾಪತ್ತೆ !

ಪುತ್ತೂರು : ವ್ಯಕ್ತಿಯೊಬ್ಬರು ಕೆರೆಗೆ ಸ್ನಾನಕ್ಕೆಂದು ಇಳಿದು ಕೆಸರಿನಲ್ಲಿ ಸಿಲುಕಿಕೊಂಡ ಘಟನೆ ಬುಳೇರಿಕಟ್ಟೆ ಬೀಡು ಸಮೀಪ ನಡೆದಿದೆ. ಅಗರ್ತಬೈಲು ಜಗನ್ ಮೋಹನ ರೈ (64) ಸೋಮವಾರ ಸ್ನಾನಕ್ಕೆಂದು ಕೆರೆಗೆ ಇಳಿದು ನಾಪತ್ತೆಯಾಗಿದ್ದಾರೆ. ಕೆರೆಯ ಸಮೀಪ ಬಟ್ಟೆ ಬರ ಪತ್ತೆಯಾಗಿದ್ದು, ಅಗ್ನಿಶಾಮಕ ದಳದವರು ಹಾಗೂ ಈಜುಪಟುಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕೆರೆ ನಿರ್ಮಾಣ ಮಾಡಲಾಗಿದ್ದು, ಕೆಸರಿನಿಂದ ಕೂಡಿದೆ. ಇದರಲ್ಲಿ ಮೇಲೆ ಬರಲಾಗದೆ ಸಿಲುಕಿರುವು ಸಾಧ್ಯತೆ ಎನ್ನಲಾಗಿದೆ.

ಕೆರೆಗೆ ಸ್ನಾನಕ್ಕೆ ಇಳಿದ ವ್ಯಕ್ತಿ ನಾಪತ್ತೆ ! Read More »

ಸಕಲೇಶಪುರ ಭೂಕುಸಿತ : 15 ದಿನ 8 ರೈಲುಗಳ ಸಂಚಾರ ಸ್ಥಗಿತ

ಸಕಲೇಶಪುರ : ತಾಲೂಕಿನ ಕಡಗರವಳ್ಳಿ- ಯಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ಸ್ಥಗಿತವಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನ ಎಡಕುಮೇರಿ ಕಡಗರವಳ್ಳಿ ಮಧ್ಯೆ  ಭೂಕುಸಿತದಿಂದಾಗಿ 14 ರೈಲುಗಳ ಸಂಚಾರ ಸ್ಥಗಿತವಾಗಿದೆ. ಹಳಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ಪುನಃಸ್ಥಾಪನೆ ಕಾಮಗಾರಿ ವಿಳಂಬವಾಗುತ್ತಿದೆ. ಇದರಿಂದ ಆಗಸ್ಟ್ 10ರ ವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಮೂಲಗಳು ತಿಳಿಸಿವೆ. ರೈಲ್ವೆ ಸಿಬ್ಬಂದಿ

ಸಕಲೇಶಪುರ ಭೂಕುಸಿತ : 15 ದಿನ 8 ರೈಲುಗಳ ಸಂಚಾರ ಸ್ಥಗಿತ Read More »

ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ | ಮಹೇಶ್ ಶೆಟ್ಟಿ ತಿಮರೋಡಿ ಬಣದಿಂದ ಕೃತ್ಯ

ಬೆಳ್ತಂಗಡಿ : ಬಿಜೆಪಿ ಕಾರ್ಯಕರ್ತನ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಬಣದವರು ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಎಂಬಲ್ಲಿ ನಡೆದಿದೆ. ಕಣಿಯೂರು ಗ್ರಾ.ಪಂ. ಬಿಜೆಪಿ ಬೆಂಬಲಿತ ಸದಸ್ಯ ಪ್ರವೀಣ್ ಗೌಡ ಹಲ್ಲೆಗೊಳಗಾದವರು. ರಾಧಾಕೃಷ್ಣ ಗೌಡ, ಪ್ರಜ್ವಲ್, ಕಿರಣ್ ಶಿಶಿಲ ಹಾಗೂ ಇತರರು ಸೇರಿ ಹಲ್ಲೆ ಮಾಡಿರುವುದಾಗಿ ತಿಳಿದುಬಂದಿದೆ. ಇವರೆಲ್ಲ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರು ಎಂದು ಹೇಳಲಾಗಿದೆ. ಮಾಹಿತಿ ಪ್ರಕಾರ ರಾಜಕೀಯ ವೈಮನಸ್ಸಿನಿಂದಲೇ ಈ ಹಲ್ಲೆ ನಡೆದಿದೆ ಎನ್ನಲಾಗಿದೆ. ಕಳೆದೆರಡು ದಿನಗಳ ಹಿಂದೆ ರಾಧಾಕೃಷ್ಣ ಗೌಡ

ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ | ಮಹೇಶ್ ಶೆಟ್ಟಿ ತಿಮರೋಡಿ ಬಣದಿಂದ ಕೃತ್ಯ Read More »

ಬಂಟ್ವಾಳ ವಿಹಿಂಪ ಪರಶುರಾಮ ಶಾಖೆಯಿಂದ ರಕ್ತದಾನ ಶಿಬಿರ, ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ

ಬಂಟ್ವಾಳ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪರಶುರಾಮ ಶಾಖೆ ಬಂಟ್ವಾಳದ ಆಶ್ರಯದಲ್ಲಿ ಕೆ.ಎಸ್‌.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಮತ್ತು ರೆಡ್ ಕ್ರಾಸ್ ರಕ್ತನಿಧಿ ಮಂಗಳೂರು ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಮತ್ತು ಬಾಲ ಸಂಸ್ಕಾರ ಕೇಂದ್ರದ ಉದ್ಘಾಟನಾ ಸಮಾರಂಭ ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನ ಸಭಾಂಗಣದಲ್ಲಿ ನಡೆಯಿತು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಅಡ್ಯಂತಾಯ ದೀಪ ಬೆಳಗಿಸಿ ಉದ್ಘಾಟಿಸಿದರು. ಅತಿಥಿಗಳಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಸಂಘಟನೆಯ ಕಾರ್ಯಕ್ಕೆ ಮೆಚ್ಚುಗೆ

ಬಂಟ್ವಾಳ ವಿಹಿಂಪ ಪರಶುರಾಮ ಶಾಖೆಯಿಂದ ರಕ್ತದಾನ ಶಿಬಿರ, ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ Read More »

ಅನಾರೋಗ್ಯದಿಂದ ಶಿವಪ್ರಕಾಶ್ ನಿಧನ

ಸುಳ್ಯ: ಕುರುಂಜಿಭಾಗ್ ನಲ್ಲಿರುವ ಮಧುವನ ಹೋಟೇಲ್ ನಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಯುವಕನೋರ್ವ ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದಿ.ರಾಮಣ್ಣ ಗೌಡರ ಪುತ್ರ ಶಿವಪ್ರಕಾಶ್ (32) ಮೃತಪಟ್ಟ ದುರ್ದೈವಿ. ಮೃತರು ಸಹೋದರರಾದ ಪದ್ಮನಾಭ, ಸುಳ್ಯದಲ್ಲಿ ಹೋಟೆಲ್ ಉದ್ಯಮಿಗಳಾಗಿರುವ ಚಿದಾನಂದ, ಲವಕುಮಾರ್, ಕುಶಾಲಪ್ಪ ಹಾಗೂ ಸಹೋದರಿ ರಜನಿಯವರನ್ನು ಅಗಲಿದ್ದಾರೆ.

ಅನಾರೋಗ್ಯದಿಂದ ಶಿವಪ್ರಕಾಶ್ ನಿಧನ Read More »

ಮಲ್ಲವ ಸಮಾಜಾಭ್ಯುದಯ ಸಂಘದ ಸಲಹೆಗಾರ ಅಶೋಕ್ ಎಲ್‍. ರಾವ್ ನಿಧನ

ಬೆಳ್ತಂಗಡಿ: ಬೆಳ್ತಂಗಡಿ ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್‍. ರಾವ್ ಅಲ್ಪ ಕಾಲದ ಅಸೌಖ್ಯದಿಂದ ಭಾನುವಾರ ನಿಧನರಾದರು. ಅಶೋಕ್ ರಾವ್ ಅವರು ಮಲ್ಲವ ಸಮಾಜಾಭ್ಯುದಯ ಸಂಘದ ಸಲಹೆಗಾರರಾಗಿದ್ದರು. ಮೃತರು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಮಲ್ಲವ ಸಮಾಜಾಭ್ಯುದಯ ಸಂಘದ ಸಲಹೆಗಾರ ಅಶೋಕ್ ಎಲ್‍. ರಾವ್ ನಿಧನ Read More »

ಹೆಚ್‍.ಡಿ.ಕುಮಾರಸ್ವಾಮಿ ಮೂಗಿನಿಂದ ರಕ್ತ ಸ್ರಾವ | ಆಸ್ಪತ್ರೆಗೆ ದಾಖಲು

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್‍ ನಿಂದ ವಾಲ್ಮೀಕಿ, ಮುಡಾ ಹಗರಣ ಖಂಡಿಸಿದ ಪಾದಯಾತ್ರೆಗೆ ತೀರ್ಮಾನ ಮಾಡಲಾಗಿದ್ದು, ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಸಂದರ್ಭ ಕೇಂದ್ರ ಸಚಿವ ಹೆಚ್‍.ಡಿ.ಕುಮಾರಸ್ವಾಮಿ ಮೂಗಿನಿಂದ ರಕ್ತ ಕಾಣಿಸಿಕೊಂಡಿದೆ. ವಾಲ್ಮೀಕಿ, ಮುಡಾ ಹಗರಣದ ವಿವಾರವಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತಾಡುತ್ತಿದ್ದರು. ಈ ವೇಳೆ ಏಕಾಏಕಿ ಮೂಗಿನಿಂದ ರಕ್ತ ಬಂದಿದೆ. ಆ ಕೂಡಲೇ ಹೆಚ್.ಡಿ.ಕುಮಾರಸ್ವಾಮಿ ಅವರು ಕರ್ಚಿಫ್ ನಿಂದ ಒರೆಸಿಕೊಂಡಿದ್ದಾರೆ. ತಕ್ಷಣ ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ. ರಕ್ತಸ್ರಾವ

ಹೆಚ್‍.ಡಿ.ಕುಮಾರಸ್ವಾಮಿ ಮೂಗಿನಿಂದ ರಕ್ತ ಸ್ರಾವ | ಆಸ್ಪತ್ರೆಗೆ ದಾಖಲು Read More »

ಪುತ್ತೂರು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ಗೌಡರ ಆಟಿ ಗೌಜಿ | ನಿವೃತ್ತ ಗೌಡ ಸರಕಾರಿ ನೌಕರರಿಗೆ ಗೌರವಾರ್ಪಣೆ, ಎಸ್‍ ಎಸ್‍ ಎಲ್‍ ಸಿ, ಪಿಯುಸಿಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ, ಆಟೋಟ ಸ್ಪರ್ಧೆ

ಹಿರೇಬಂಡಾಡಿ: ಪುತ್ತೂರು ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಹಿರೇಬಂಡಾಡಿ ಒಕ್ಕಲಿಗ ಗೌಡ ಸೇವಾ ಸಮಿತಿ, ಹಿರೇಬಂಡಾಡಿ ಒಕ್ಕಲಿಗ ಮಹಿಳಾ ಘಟಕ, ಹಿರೇಬಂಡಾಡಿ ಒಕ್ಕಲಿಗ ಯುವ ಘಟಕ, ಹಿರೇಬಂಡಾಡಿ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ಸಂಘಗಳ ಒಕ್ಕೂಟಗಳ ಸಹಯೋಗದಲ್ಲಿ ಗೌಡರ ಆಟಿ ಗೌಜಿ ಕಾರ್ಯಕ್ರಮ ಇಂದು ಹಿರೇಬಂಡಾಡಿ ಮುರದಮೇಲು ಶಿವನಗರ ಶ್ರೀ ಮಂಜುಶ್ರೀ ಭಜನಾ ಮಂದಿರದಲ್ಲಿ ನಡೆಯಿತು. ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಮುಖ್ಯ ಅಥಿಯಾಗಿ ಪಾಲ್ಗೊಂಡು ಶುಭ ಹಾರೈಸಿದರು. ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ

ಪುತ್ತೂರು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ಗೌಡರ ಆಟಿ ಗೌಜಿ | ನಿವೃತ್ತ ಗೌಡ ಸರಕಾರಿ ನೌಕರರಿಗೆ ಗೌರವಾರ್ಪಣೆ, ಎಸ್‍ ಎಸ್‍ ಎಲ್‍ ಸಿ, ಪಿಯುಸಿಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ, ಆಟೋಟ ಸ್ಪರ್ಧೆ Read More »

ತೆರೆಮರೆಯ ಸಾಧಕರನ್ನು ಸಮಾಜಕ್ಕೆ ತಿಳಿಸುವ ಕಾರ್ಯ ಪ್ರಧಾನಿಯವರ ಮನ್ ಕಿ ಬಾತ್‌ನಿಂದ ಆಗುತ್ತಿದೆ : ಭಾಗೀರಥಿ ಮುರುಳ್ಯ | ಪಾಲ್ತಾಡಿ ಬೂತ್ 70ರಲ್ಲಿ ಮನ್ ಕಿ ಬಾತ್ ವೀಕ್ಷಣೆ

ಸವಣೂರು: ತೆರೆಮರೆಯ ಸಾಧಕರನ್ನು ಸಮಾಜಕ್ಕೆ ತಿಳಿಸುವ ಕಾರ್ಯ ಪ್ರಧಾನಿಯವರ ಮನ್ ಕಿ ಬಾತ್‌ನಿಂದ ಆಗುತ್ತಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಪಾಲ್ತಾಡಿ ಗ್ರಾಮದ ಬಂಬಿಲ ಯಮುನಾ ಅವರ ಮನೆಯಲ್ಲಿ ನಡೆದ ಸುಳ್ಯ ಮಂಡಲ, ಸವಣೂರು ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 70 (ಪಾಲ್ತಾಡಿ 1) ರಲ್ಲಿ ಜುಲೈ 28ರಂದು ನಡೆದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ವೀಕ್ಷಣೆಯ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಪ್ರವಾಸಿ ಕಾರ್ಯಕರ್ತರಾದ

ತೆರೆಮರೆಯ ಸಾಧಕರನ್ನು ಸಮಾಜಕ್ಕೆ ತಿಳಿಸುವ ಕಾರ್ಯ ಪ್ರಧಾನಿಯವರ ಮನ್ ಕಿ ಬಾತ್‌ನಿಂದ ಆಗುತ್ತಿದೆ : ಭಾಗೀರಥಿ ಮುರುಳ್ಯ | ಪಾಲ್ತಾಡಿ ಬೂತ್ 70ರಲ್ಲಿ ಮನ್ ಕಿ ಬಾತ್ ವೀಕ್ಷಣೆ Read More »

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ | ಪ್ರಯಾಣಿಕರು ಪಾರು

ಪುತ್ತೂರು: ಕಾರೊಂದು ಪಲ್ಟಿಯಾದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಪೇಟೆಯಲ್ಲಿ ಇಂದು ನಡೆದಿದೆ. ಕಾರು ಪಲ್ಟಿಯಾಗಿ ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಕಬ್ಬಿಣದ ತಡೆ ಬೇಲಿಗೆ ಕ್ರೇಟಾ ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದು ಓರ್ವ ಮಹಿಳೆಯ ಮುಖಕ್ಕೆ ಅಲ್ಪ ಗಾಯವಾಗಿರುವುದು ಬಿಟ್ಟರೆ ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆಯಿಂದ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ರಸ್ತೆ ಬದಿಯ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ | ಪ್ರಯಾಣಿಕರು ಪಾರು Read More »

error: Content is protected !!
Scroll to Top