ಮಣ್ಣು ಕುಸಿತ : ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ
ಮಂಗಳೂರು: ಮಣ್ಣು ಜರಿದು ಬಿದ್ದ ಹಿನ್ನಲೆಯಲ್ಲಿ ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗದಲ್ಲಿ ರೈಲು ಸಂಪರ್ಕ ಸ್ಥಗಿತಗೊಂಡಿದೆ. ಸುಬ್ರಹ್ಮಣ್ಯ-ಎಡಕುಮೇರಿ ಮಾರ್ಗ ಮಧ್ಯದ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದ ಕೆಳಗಿನಿಂದ ಮಣ್ಣು ಕುಸಿದಿದೆ. ಈ ಪರಿಣಾಮ ಸಂಜೆ 5.30ಕ್ಕೆ ಸುಬ್ರಹ್ಮಣ್ಯ ರೈಲು ನಿಲ್ದಾಣದಿಂದ ಹೊರಟ ಬಿಜಾಪುರ ಎಕ್ಸ್ ಪ್ರೆಸ್ ರೈಲು ವಾಪಾಸ್ಸು ಸುಬ್ರಹ್ಮಣ್ಯ ನಿಲ್ದಾಣಕ್ಕೆ ಬಂದಿದೆ ಎನ್ನಲಾಗಿದ್ದು, ಮಂಗಳೂರು-ಬೆಂಗಳೂರು ರೈಲು ಸೇರಿದಂತೆ ಮಾರ್ಗದ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.
ಮಣ್ಣು ಕುಸಿತ : ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ Read More »










