ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಗತಿ ಉದ್ಘಾಟನೆ

ಪುತ್ತೂರು : ಬನ್ನೂರು ಕೃಷ್ಣನಗರದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಯೋಗ ತರಗತಿ ಜು 22 ರಂದು ಪ್ರಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ಪತಂಜಲಿ ಯೋಗ  ಶಿಕ್ಷಣ ಸಂಸ್ಥೆಯ ಶಿಕ್ಷಕಿಯಾಗಿರುವ ಶ್ರೀಮತಿ ಲಲಿತಾರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯೋಗದ ಮಹತ್ವವನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ಹಾಗೂ ವಿವಿಧ ರೀತಿಯ ಯೋಗಾಸನಗಳನ್ನು ಹೇಳಿಕೊಟ್ಟರು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾಗಿರುವಂತಹ ಶ್ರೀಯುತ ವೆಂಕಟರಮಣಗೌಡ ಕಳುವಾಜೆ ವಹಿಸಿದ್ದು ಶಾಲೆಯಲ್ಲಿ ಯೋಗದ ಮಹತ್ವವನ್ನು ಹೇಳಿದರು. ವೇದಿಕೆಯಲ್ಲಿ ಸಂಸ್ಥೆಯ […]

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಗತಿ ಉದ್ಘಾಟನೆ Read More »

ಆರ್ ಎಸ್ ಎಸ್ ಸೇರಲು ಇನ್ನು ಸರಕಾರಿ ನೌಕರರಿಗೆ ಮುಕ್ತ ಅವಕಾಶ | ಸದಸ್ಯತ್ವ ಪಡೆಯುವುದಕ್ಕೆ ವಿಧಿಸಲಾಗಿದ್ದ ನಿಷೇಧ ವಾಪಾಸು

ನವದೆಹಲಿ : ಕೇಂದ್ರ ಸರ್ಕಾರವು ದಶಕಗಳ ಹಿಂದೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದು ಮತ್ತು ಸದಸ್ಯತ್ವ ಪಡೆಯುವುದಕ್ಕೆ ವಿಧಿಸಲಾಗಿದ್ದ ನಿಷೇಧವನ್ನು ವಾಪಸ್ ಪಡೆದಿದೆ. ಜು. 9ರಂದೇ ಈ ಸಂಬಂಧ ಸರ್ಕಾರ ಹೊರಡಿಸಿದ್ದ ಜ್ಞಾಪನಾ ಪತ್ರ ಸೋಮವಾರ ಬಹಿರಂಗವಾಗಿದೆ. ಭಾರತೀಯ ಸೇವಾ ನಿಯಮವು 1966ರಿಂದ ಸರ್ಕಾರಿ ಸಿಬ್ಬಂದಿಗೆ ಆರ್‌ಎಸ್‌ಎಸ್‌ ಮತ್ತು ‘ಜಮಾತ್- ಎ-ಇಸ್ಲಾಮಿ’ ಸಂಘಟನೆಗಳ ಸದಸ್ಯತ್ವ ಪಡೆಯುವುದು ಮತ್ತು ಅವುಗಳ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಿತ್ತು.ಭಾರತೀಯ ಸೇವಾ ನಿಯಮವು 1966ರಿಂದ ಸರ್ಕಾರಿ ಸಿಬ್ಬಂದಿಗೆ

ಆರ್ ಎಸ್ ಎಸ್ ಸೇರಲು ಇನ್ನು ಸರಕಾರಿ ನೌಕರರಿಗೆ ಮುಕ್ತ ಅವಕಾಶ | ಸದಸ್ಯತ್ವ ಪಡೆಯುವುದಕ್ಕೆ ವಿಧಿಸಲಾಗಿದ್ದ ನಿಷೇಧ ವಾಪಾಸು Read More »

ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿ ಕಾರ್ಮಿಕ ಗಂಭೀರ ಗಾಯ

ಪುತ್ತೂರು: ಲಾರಿಯೊಂದಕ್ಕೆ ಟಯರ್ ಜೋಡಣೆ ವೇಳೆ ಟಯರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ಕರಾಯ ಜನತಾ ಕಾಲೋನಿ ನಿವಾಸಿ ರಶೀದ್ ಗಂಭೀರ ಗಾಯಗೊಂಡವರು. ಲಾರಿಯೊಂದು ಟಯರ್ ಪಂಚರ್ ಆದ ಪರಿಣಾಮ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚರ್ ಮಾಡಿಸಿಕೊಂಡು ಆಟೋರಿಕ್ಷಾದಲ್ಲಿ ಟಯರ್ ತಂದಿದ್ದರು. ಟಯರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ

ಲಾರಿಗೆ ಟಯರ್ ಜೋಡಣೆ ವೇಳೆ ರಿಂಗ್ ಚಿಮ್ಮಿ ಕಾರ್ಮಿಕ ಗಂಭೀರ ಗಾಯ Read More »

ಕ್ಯಾಂಪ್ಕೋ ಸಂಸ್ಥೆಯ ಸಾಂತ್ವನ ಯೋಜನೆಯ ಚೆಕ್ ಹಸ್ತಾಂತರ

ಪುತ್ತೂರು ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿ ಕ್ಯಾಂಪ್ಕೊ ಸುಳ್ಯ ಶಾಖೆಯ ಸಕ್ರಿಯ ಸದಸ್ಯ  ಪ್ರದ್ಯುಮ್ನ ಅವರ ಕೃಷಿ ಸ್ಥಳದಲ್ಲಿ ಕೆಲಸಗಾರರಾಗಿದ್ದ ಯೋಗೀಶ್ ಪಿ. ಅವರ ಆಕಸ್ಮಿಕ ಮರಣ ಪರಿಹಾರವಾಗಿ  ಸಹಾಯಧನದ ಮೊತ್ತ 50,000 ರೂ. ಚೆಕ್ಕನ್ನು ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ ಯೋಗೀಶ್ ಪಿ. ಅವರ ತಾಯಿ  ಮೀನಾಕ್ಷಿ  ಅವರಿಗೆ ಹಸ್ತಾಂತರಿಸಿದರು. ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ ಮಾತನಾಡಿ, ಕ್ಯಾಂಪ್ಕೊ ಸುಳ್ಯ ಶಾಖೆಯಲ್ಲಿ  ಪ್ರಪ್ರಥಮವಾಗಿ ಸದಸ್ಯರ ಕೃಷಿ ಸ್ಥಳದಲ್ಲಿ ಆಕಸ್ಮಿಕ ಮರಣ ಹೊಂದಿದ ಕೆಲಸಗಾರರಿಗೆ  ಪರಿಹಾರ ನೀಡಲಾಗಿದೆ.

ಕ್ಯಾಂಪ್ಕೋ ಸಂಸ್ಥೆಯ ಸಾಂತ್ವನ ಯೋಜನೆಯ ಚೆಕ್ ಹಸ್ತಾಂತರ Read More »

ಸ್ಕೂಟಿ-ಸರಕಾರಿ ಬಸ್ ಅಪಘಾತ | ಸ್ಕೂಟಿ ಸವಾರ, ನೆಲ್ಲೂರು ಕೆಮ್ರಾಜೆ ಪಂಚಾಯಿತಿ ಸದಸ್ಯ ಮೃತ್ಯು

ಸುಳ್ಯ: ದ್ವಿಚಕ್ರ ವಾಹನ ಹಾಗೂ ಸರಕಾರಿ  ಬಸ್ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸೋಣಂಗೇರಿ ಸಮೀಪದ ಸುತ್ತುಕೋಟೆಯಲ್ಲಿ ಇಂದು ನಡೆದಿದೆ. ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಸದಸ್ಯ ರಾಮಚಂದ್ರ ಪ್ರಭು (68) ಮೃತಪಟ್ಟವರು. ರಾಮಚಂದ್ರ ಪ್ರಭು ಅವರು ತನ್ನ ಸ್ಕೂಟಿಯಲ್ಲಿ ಸುಳ್ಯಕ್ಕೆ ಬರುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್ ನಡುವೆ ಅಪಘಾತವಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ರಾಮಚಂದ್ರ ಪ್ರಭುರವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಾಮಚಂದ್ರ ಪ್ರಭು

ಸ್ಕೂಟಿ-ಸರಕಾರಿ ಬಸ್ ಅಪಘಾತ | ಸ್ಕೂಟಿ ಸವಾರ, ನೆಲ್ಲೂರು ಕೆಮ್ರಾಜೆ ಪಂಚಾಯಿತಿ ಸದಸ್ಯ ಮೃತ್ಯು Read More »

ಶೈಕ್ಷಣಿಕೇತರ ಚಟುವಟಿಕೆಗಳಿಗೆ ಶಾಲಾ ಆವರಣ ಬಳಸುವುದಕ್ಕೆ ನಿಷೇಧ | ಸಂಸದ ಕ್ಯಾ.ಬ್ರಿಜೇಶ್‍ ಚೌಟ ಖಂಡನೆ

ಮಂಗಳೂರು: ಶಾಲಾ ಆವರಣ ಮತ್ತು ಮೈದಾನವನ್ನು ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸುವುದಕ್ಕೆ ನಿಷೇಧಿಸಿ ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹೊರಡಿಸಿರುವ ಕ್ರಮವನ್ನು ಸಂಸದ ಕ್ಯಾ.ಬ್ರಿಜೇಶ್ ಚೌಟ ಖಂಡಿಸಿದ್ದಾರೆ. ದೈವ, ದೇವರುಗಳ ನಾಡಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಸಾಂಸ್ಕೃತಿಕ ಹಾಗೂ ದೈವೀಕ ಆಚರಣೆಯನ್ನು ಸದಾ ಮೈಗೂಡಿಸಿಕೊಂಡಿರುವ ನೆಲೆ, ಹಬ್ಬ ಹರಿದಿನಗಳು ಸಮೀಪಿಸುತ್ತಿರುವ ಸಂದರ್ಭದಲ್ಲಿ ಹಿಂದೂ ಆಚರಣೆಗಳಿಗೆ ತೊಡಕನ್ನು ಉಂಟು ಮಾಡಿ ನಮ್ಮ ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ ಹಾಗೂ ಕಾಂಗ್ರೆಸ್ ಪಾರ್ಟಿ ಮತ್ತು ಸಿದ್ದರಾಮಯ್ಯ ಸರಕಾರದ

ಶೈಕ್ಷಣಿಕೇತರ ಚಟುವಟಿಕೆಗಳಿಗೆ ಶಾಲಾ ಆವರಣ ಬಳಸುವುದಕ್ಕೆ ನಿಷೇಧ | ಸಂಸದ ಕ್ಯಾ.ಬ್ರಿಜೇಶ್‍ ಚೌಟ ಖಂಡನೆ Read More »

ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ಸಾಂಪ್ರದಾಯಿಕ ಭತ್ತದ ಸಸಿ ನಾಟಿ ಕಾರ್ಯಕ್ರಮ

ಕಬಕ: ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಪುತ್ತೂರು ಪ್ರಾಯೋಜಕತ್ವದಲ್ಲಿ, ಒಕ್ಕಲಿಗ ಸ್ವ-ಸಹಾಯ ಸಂಘಗಳ ಒಕ್ಕೂಟ ಕಬಕ, ಒಕ್ಕಲಿಗ ಸೇವಾ ಸಂಘ ಕಬಕ, ಒಕ್ಕಲಿಗ ಯುವ ಸಂಘ ಕಬಕ, ಒಕ್ಕಲಿಗ ಮಹಿಳಾ ಸಂಘ ಕಬಕ ಇವರ ಸಹಕಾರದೊಂದಿಗೆ ಸಾಂಪ್ರದಾಯಿಕ ಭತ್ತದ ಸಸಿ ನಾಟಿ ಪ್ರಾತ್ಯಕ್ಷಿತೆ ಕಾರ್ಯಕ್ರಮ ಕಬಕ ತಿಮ್ಮಪ್ಪ ಗೌಡ ಶೇವಿರೆ ಅವರ ಕೃಷಿ ಗದ್ದೆಯಲ್ಲಿ ನಡೆಯಿತು. ಒಕ್ಕಲಿಗ ಸ್ವಸಹಾಯ ಟ್ರಸ್ಟ್ ನ ದಶಮಾನೋತ್ಸವದ ಕಾರ್ಯಕ್ರಮ ಅಂಗವಾಗಿ  ಈ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ

ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ಸಾಂಪ್ರದಾಯಿಕ ಭತ್ತದ ಸಸಿ ನಾಟಿ ಕಾರ್ಯಕ್ರಮ Read More »

ಅಸಹಜ ಲೈಂಗಿಕ ದೌರ್ಜನ್ಯ : ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ ನಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ ಸೋಮವಾರ ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿತ್ತು. ನ್ಯಾಯಾಲಯ ಷರತ್ತುಬದ್ಧ  ಹೊರಡಿಸಿದ್ದು, ನ್ಯಾಯಾಲಯದಿಂದ ಲಿಖಿತ ಅನುಮತಿ ಪಡೆದಿರಬೇಕು, ತಿಂಗಳ ಪ್ರತಿ ಎರಡನೇ ಭಾನುವಾರ ಮತ್ತು ಬೆಳಿಗ್ಗೆ 9.00 ರಿಂದ

ಅಸಹಜ ಲೈಂಗಿಕ ದೌರ್ಜನ್ಯ : ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು Read More »

ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ – ಮಗ ಸಾವು

ರಾಮನಗರ : ಮಾಗಡಿ ಪಟ್ಟಣದ ಜ್ಯೋತಿ ನಗರದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಶೋಭ (38) ದಿಲೀಪ್ (16) ಮೃತರ. ಮನೆಯಲ್ಲಿ ಸ್ನಾನ ಮಾಡಲು ಅಂತ ದಿಲೀಪ್ ಹೋಗಿದ್ದ ವೇಳೆ ಗೀಸರ್ ಅನಿಲ ಸೋರಿಕೆಯಾಗಿದೆ. ಸೋರಿಕೆಯಾದ ಅನಿಲ ಸೇವಿಸಿ ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ನಾನ ಮಾಡಲು ಹೋದ ದಿಲೀಪ್ ಸಾಕಷ್ಟು ಸಮಯ ಕಳೆದರೂ ಹೊರ ವಾರದ ಹಿನ್ನಲೆಯಲ್ಲಿ ತಾಯಿ ಕೂಡ ಒಳಗಡೆ ಹೋಗಿದ್ದಾಳೆ. ಇದೇ ವೇಳೆ ಗೀಸರ್ ಗಾಳಿ

ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ – ಮಗ ಸಾವು Read More »

ಶಿರಾಡಿ ಘಾಟಿನಲ್ಲಿ ಎರಡನೇ ಬಾರಿ ಭೂಕುಸಿತ | ಮಣ್ಣಿನಲ್ಲಿ ಹೂತು ಹೋದ ಪೊಲೀಸ್ ವಾಹನ

ಸಕಲೇಶಪುರ :  ಮತ್ತೆ ಶಿರಾಡಿ ಘಾಟ್ ನಲ್ಲಿ  ಭೂಕುಸಿತ ಸಂಭವಿಸಿದೆ. ಮಣ್ಣು ಕುಸಿತದಲ್ಲಿ ಪೊಲೀಸ್ ವಾಹನ ಸಿಲುಕಿಕೊಂಡಿದೆ.  ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲೆ ಬಳಿ ಘಟನೆ ನಡೆದಿದು ಪೊಲೀಸರು ನಿಲ್ಲಿಸಿದ್ದ ವಾಹನದ ಬಳಿಯೇ ಭೂಕುಸಿತ ಸಂಭವಿಸಿದೆ. KA-13 G-1713  ನಂಬರ್ ನ ಹೈವೇ ಪಟ್ರೋಲ್ ವಾಹನಕ್ಕೆ ಸಣ್ಣಪುಟ್ಟ ಹಾನಿಯಾಗಿದೆ.

ಶಿರಾಡಿ ಘಾಟಿನಲ್ಲಿ ಎರಡನೇ ಬಾರಿ ಭೂಕುಸಿತ | ಮಣ್ಣಿನಲ್ಲಿ ಹೂತು ಹೋದ ಪೊಲೀಸ್ ವಾಹನ Read More »

error: Content is protected !!
Scroll to Top