ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಕ್ರೈಂ ತಡೆಗಟ್ಟಲು ಸಹಾಯವಾಣಿ ಆರಂಭ

ಬೆಂಗಳೂರು : ಕೆಲವು  ದಿನಗಳಿಂದ  ಕರ್ನಾಟಕದಲ್ಲಿ ಸೈಬ‌ರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಸೈಬ‌ರ್ ವಂಚಕರ ಬಲೆಗೆ ಬಿದ್ದು ಜನರು ಕೋಟ್ಯಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಇದೀಗ ಸೈಬರ್ ಕ್ರೈಂ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಇಲಾಖೆ 1930 ಎಂಬ ಸಹಾಯವಾಣಿ ಆರಂಭಿಸಿದೆ. ಈ ಬಗ್ಗೆ ಟ್ವಿಟ್ ಮಾಡಿದ ರಾಜ್ಯ ಪೊಲೀಸ್ ಇಲಾಖೆ, ಆತ್ಮೀಯ ಆನ್‌ಲೈನ್ ಬಳಕೆದಾರರೇ ಸೈಬರ್ ವಂಚನೆಯಿಂದ ದೂರ ಇರಲು ನಿಮ್ಮ ನಡೆಯ ಯಾವುದೇ ಸುಳಿವು ವಂಚಕರಿಗೆ ನೀಡಬೇಡಿ. ಒಂದು ವೇಳೆ ನೀವು ಸೈಬರ್ ಬಲೆಯಲ್ಲಿ ಸಿಲುಕಿದ್ದರೆ […]

ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಕ್ರೈಂ ತಡೆಗಟ್ಟಲು ಸಹಾಯವಾಣಿ ಆರಂಭ Read More »

ಹಿರಿಯ ಪತ್ರಕರ್ತ ಈಚನೂರು ಕುಮಾರ್  ನಿಧನ

ಮೈಸೂರು : ಹಿರಿಯ ಪತ್ರಕರ್ತ, ಇತಿಹಾಸ ತಜ್ಞ ಈಚನೂರು ಕುಮಾ‌ರ್ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲಿದ್ದ ಅವರು ಶನಿವಾರ (ಜು.20) ಬೆಳಗ್ಗೆ 11:30ರ ವೇಳೆಗೆ ಮೈಸೂರಿನ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಪುತ್ರಿ ಅಕ್ಷರಾ, ಪುತ್ರ ಅಜಿತ್ ಇದ್ದಾರೆ. ಮಕ್ಕಳಿಬ್ಬರೂ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸುಮಾರು ಐದು ದಶಕಗಳಿಂದ ಪತ್ರಕರ್ತರಾಗಿದ್ದ ಈಚನೂರು ಕುಮಾ‌ರ್ ಅಪಾರ ಅನುಭವ ಹೊಂದಿದ್ದರು. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಈಚನೂರಿನವರಾದ ಕುಮಾರ್ ಮೈಸೂರಿನಲ್ಲೇ ಬಹುಕಾಲದಿಂದ ವಾಸವಾಗಿದ್ದರು. ಲೋಕವಾಣಿ, ನವಧ್ವನಿ, ಮೈಸೂರು ಮಿತ್ರ, ಸ್ಟಾರ್ ಆಫ್

ಹಿರಿಯ ಪತ್ರಕರ್ತ ಈಚನೂರು ಕುಮಾರ್  ನಿಧನ Read More »

ಪತ್ನಿಗೆ ಗುಂಡು ಹಾರಿಸಿ ಹತ್ಯೆಗೈದ ಪತಿ

ಮಡಿಕೇರಿ : ಕೊಡಗಿನ ವಿರಾಜಪೇಟೆ ಸಮೀಪದ ಬೆಟೋಳಿಯಲ್ಲಿ ಪತಿಯೇ ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಈ ಘಟನೆ ನಡೆದಿದೆ.   ಶಿಲ್ಪ (36) ಮೃತಪಟ್ಟ ದುರ್ದೈವಿ ಎಂದು ತಿಳಿದುಬಂದಿದೆ.  ಹತ್ಯೆಗೆ ಬೆಟೋಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು ನಾಯಕಂಡ ಬೋಪಣ್ಣ (45) ಎಂಬಾತನಿಂದ ಈ ಕೃತ್ಯ ನಡೆದಿದೆ. ಪತಿಯನ್ನು ಹತ್ಯೆಮಾಡಿದ ಬಳಿಕ ಬೋಪಣ್ಣ ಕೋವಿಯೊಂದಿಗೆ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ

ಪತ್ನಿಗೆ ಗುಂಡು ಹಾರಿಸಿ ಹತ್ಯೆಗೈದ ಪತಿ Read More »

ಕುಮಾರಧಾರ ನದಿಯಲ್ಲಿ ಯುವಕನ ಮೃತದೇಹ ಪತ್ತೆ

ಕಾಣಿಯೂರು : ಕಡಬ ತಾಲೂಕಿನ ಕಾಯಿಮಣ ಗ್ರಾಮದ ನಾಯಿತಡ್ಕ ಎಂಬಲ್ಲಿಂದ ನಾಪತ್ತೆಯಾಗಿದ್ದ ಸುರೇಶ್(40ವ.)ಅವರ ಶವ ಶುಕ್ರವಾರ ಸಂಜೆ ಕುಮಾರಾಧಾರ ನದಿಯಲ್ಲಿ ಪತ್ತೆಯಾಗಿದೆ. ಅವಿವಾಹಿತರಾಗಿದ್ದ ಸುರೇಶ್ ಜು.15ರ ರಾತ್ರಿ ಮನೆಯಿಂದ ಹೊರಟು ಹೋದವರು ನಾಪತ್ತೆಯಾಗಿದ್ದರು. ಇತ್ತೀಚೆಗೆ ಈತ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಮೃತನ ಸಹೋದರ ಚಿದಾನಂದ ಅವರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದರು.ಪ್ರಕರಣ ದಾಖಲಾಗಿತ್ತು.ಸುರೇಶ್ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದ ವೇಳೆ ಅವರ ಶರ್ಟ್ ಹಾಗೂ ಛತ್ರಿ ಕಾಪೆಜಾಲು ಹೊಳೆ ಬದಿಯಲ್ಲಿ ಪತ್ತೆಯಾಗಿತ್ತು.ಆತ ಹೊಳೆಗೆ ಬಿದ್ದು ನೆರೆ ನೀರಿನಲ್ಲಿ

ಕುಮಾರಧಾರ ನದಿಯಲ್ಲಿ ಯುವಕನ ಮೃತದೇಹ ಪತ್ತೆ Read More »

ಶಿರಾಡಿ ಘಾಟ್ : ಬೆಳಿಗ್ಗೆ 6 ರಿಂದ ಸಂಜೆ 6 ರ ತನಕ ವಾಹನ ಸವಾರರಿಗೆ ಅವಕಾಶ

ಸುಬ್ರಹ್ಮಣ್ಯ : ಶಿರಾಡಿ ಘಾಟಿ ರಸ್ತೆಯಲ್ಲಿ ದಿನಪೂರ್ತಿ ವಾಹನ ಸಂಚಾರ ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಶುಕ್ರವಾರ ಹಾಸನ ಜಿಲ್ಲಾಡಳಿತ ವಾಪಸ್‌ ಪಡೆದು, ನಿರ್ಬಂಧಿತ ನಿಯಮಗಳಡಿ ವಾಹನ ಸಂಚಾರಕ್ಕೆ ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ. ಶಿರಾಡಿ ಘಾಟಿಯಲ್ಲಿ ಶನಿವಾರ (ಜು.20)ದಿಂದ ಬೆಳಗ್ಗೆ 6ರಿಂದ ಸಂಜೆ 6ರ ತನಕ ಶಿರಾಡಿ ಹೆದ್ದಾರಿ ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಕಲೇಶಪುರ ಉಪವಿಭಾಗಾಧಿಕಾರಿ ಶೃತಿ ತಿಳಿಸಿದ್ದಾರೆ. ರಾತ್ರಿ ಅವಧಿಯಲ್ಲಿ ವಾಹನ ಸಂಚಾರಕ್ಕೆ ನಿಷೇಧಿಸಿದೆ. ಗುರುವಾರ ಬೆಳಿಗ್ಗೆ ದೊಡ್ಡತಪ್ಪು ಬಳಿ ಗುಡ್ಡ

ಶಿರಾಡಿ ಘಾಟ್ : ಬೆಳಿಗ್ಗೆ 6 ರಿಂದ ಸಂಜೆ 6 ರ ತನಕ ವಾಹನ ಸವಾರರಿಗೆ ಅವಕಾಶ Read More »

ಸರಕಾರಿ ಮೀಸಲಾತಿ ವಿರೋಧಿಸಿ ಬಾಂಗ್ಲಾದಲ್ಲಿ ಪ್ರತಿಭಟನೆ | 150 ಕ್ಕೂ ಅಧಿಕ ಮಂದಿ  ಮೃತ್ಯು

ಬಾಂಗ್ಲಾದೇಶ :  ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ಜು.1ರಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಢಾಕಾ ಸೇರಿದಂತೆ ದೇಶದ ವಿವಿಧೆಡೆ ನಡೆದ ಹಿಂಸಾಚಾರದಲ್ಲಿ 105 ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ಧಾರೆ. ಪ್ರತಿಭಟನಾಕಾರರು ಬಾಂಗ್ಲಾದ ರಾಜಧಾನಿ ಢಾಕಾದಲ್ಲಿನ ರಾಜ್ಯ ಸರ್ಕಾರ ಸುದ್ದಿವಾಹಿನಿಗೆ ಬೆಂಕಿ ಹಚ್ಚುವ ಒಂದು ದಿನ ಮೊದಲು, ಸರ್ಕಾರಿ ಟಿವಿ ಕಚೇರಿಯಲ್ಲಿ ಪ್ರಧಾನಿ ಶೇಖ್ ಹಸೀನಾ ಅವರ ಸಂದರ್ಶನ ನಡೆದಿತ್ತು. ಈ ಸಂದರ್ಶನದಲ್ಲಿ ಅವರು, ಪ್ರತಿಭಟನಾಕಾರರು ಮೀಸಲಾತಿಯನ್ನು ಕೊನೆಗೊಳಿಸಬೇಕೆಂಬ ತಮ್ಮ ಬೇಡಿಕೆಗೆ

ಸರಕಾರಿ ಮೀಸಲಾತಿ ವಿರೋಧಿಸಿ ಬಾಂಗ್ಲಾದಲ್ಲಿ ಪ್ರತಿಭಟನೆ | 150 ಕ್ಕೂ ಅಧಿಕ ಮಂದಿ  ಮೃತ್ಯು Read More »

ಯುವತಿ ಸ್ನಾನ ಮಾಡುತ್ತಿದ್ದಾಗ ವೀಡಿಯೋ ಚಿತ್ರೀಕರಣ | ಯುವಕನಿಗೆ ಸ್ಥಳೀಯರಿಂದ ಹೊಡೆತ

ಮಂಗಳೂರು : ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದಾಗ ಮನೆಯ ಹಿಂಭಾಗದಿಂದ ಯುವಕನೊಬ್ಬ ವೀಡಿಯೋ ಮಾಡುತ್ತಿದ್ದಾಗ ಸಿಕ್ಕಿಬಿದ್ದು, ಸ್ಥಳೀಯರಿಂದ ಏಟು ತಿಂದ ಘಟನೆ ನಡೆದಿದೆ. ಬೆಂಗ್ರೆ ನಿವಾಸಿ ಮೊಹಮ್ಮದ್ ರಂಶಿದ್ (21)ಆರೋಪಿ. ರಂಶಿದ್‌ ಮಾದಕ ದ್ರವ್ಯ ವ್ಯಸನಿಯೂ ಆಗಿದ್ದ ಎನ್ನಲಾಗಿದೆ. ರಂಶಿದ್ ನನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಯುವತಿ ಸ್ನಾನ ಮಾಡುತ್ತಿದ್ದಾಗ ವೀಡಿಯೋ ಚಿತ್ರೀಕರಣ | ಯುವಕನಿಗೆ ಸ್ಥಳೀಯರಿಂದ ಹೊಡೆತ Read More »

ಯುವಕ ಹೊಳೆಗೆ ಹಾರಿರುವ ಶಂಕೆ | ಮೊಬೈಲ್, ಪರ್ಸ್ ಪತ್ತೆ

ಸವಣೂರು: ಯುವಕನೋರ್ವ ಸರ್ವೆ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಚಂದ್ರ ಪಟ್ಟೆ ಸವಣೂರು ಎಂಬವರ ಪುತ್ರ ಸನ್ಮಿತ್ ಸರ್ವೆ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಆತನ ಮೊಬೈಲ್‍, ಪರ್ಸ್‍, ಹೊಳೆ ಸಮೀಪದ ಪತ್ತೆಯಾಗಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ

ಯುವಕ ಹೊಳೆಗೆ ಹಾರಿರುವ ಶಂಕೆ | ಮೊಬೈಲ್, ಪರ್ಸ್ ಪತ್ತೆ Read More »

ಜು.25-26 : ಬೆಂಗಳೂರಿನ ಜೈನ್ ಲರ್ನಿಂಗ್ ರಿಸೋರ್ಸ್‍ ಸೆಂಟರ್ ನಿಂದ ಅಂತರಾಷ್ಟ್ರೀಯ ಸಮ್ಮೇಳನ

ಬೆಂಗಳೂರು: ಬೆಂಗಳೂರಿನ ಜೈನ್ ಲರ್ನಿಂಗ್ ರಿಸೋರ್ಸ್‍ ಸೆಂಟರ್ ವತಿಯಿಂದ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನ ಜು.25 ಹಾಗೂ 26 ರಂದು ಬೆಂಗಳೂರು ಜಯನಗರದಲ್ಲಿರುವ ಜೈನ್ ನಾಲೆಡ್ಜ್ ಕ್ಯಾಂಪಸ್ ನ ಎರಡನೇ ಮಹಡಿಯಲ್ಲಿರುವ ಕಾನ್ಫರೆನ್ಸ್‍ ಹಾಲ್‍ ನಲ್ಲಿ ನಡೆಯಲಿದೆ. ಬೆಂಗಳೂರು ಕರ್ನಾಟಕ ರಾಜ್ಯ ಲೈಬ್ರೇರಿ ಅಸೋಸಿಯೇಶನ್‍ (ಕೆಎಎಲ್‍ ಎ) ಸಹಯೋಗದೊಂದಿಗೆ ನಡೆಯುವ ಸಮ್ಮೇಳನದಲ್ಲಿ  ಲಿಂಕಿಂಗ್‍, ಇನ್‍ ಫಾರ್ಮಿಂಗ್ ಮತ್ತು ಶೇರಿಂಗ್‍, ಬಿಲ್ಡಿಂಗ್‍ ರಿಸೀಲಿಯಂಟ್ ಎಜ್ಯುಕೇಶನ್‍ ಮತ್ತು ಲೈಬ್ರೇರಿ ಸಿಸ್ಟಮ್ಸ್‍ ಕುರಿತು ವಿಷಯ ಮಂಡನೆಗೊಳ್ಳಲಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಂಥಪಾಲಕಿ ಡಾ.ಮೀರಮಣಿ

ಜು.25-26 : ಬೆಂಗಳೂರಿನ ಜೈನ್ ಲರ್ನಿಂಗ್ ರಿಸೋರ್ಸ್‍ ಸೆಂಟರ್ ನಿಂದ ಅಂತರಾಷ್ಟ್ರೀಯ ಸಮ್ಮೇಳನ Read More »

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ನಾಳೆ (ಜು.20) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ನಾಳೆ (ಜು.20) ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಪ್ರೌಡಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ದ.ಕ., ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ನದಿ ತೀರ, ಸಮುದ್ರ ದೆಡಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.

ಭಾರೀ ಮಳೆ : ದ.ಕ.ಜಿಲ್ಲಾದ್ಯಂತ ನಾಳೆ (ಜು.20) ಶಾಲೆ–ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ Read More »

error: Content is protected !!
Scroll to Top