ಶ್ರೀ ಕ್ಷೇತ್ರ ಶೃಂಗೇರಿ ಶಾರದಾಂಬ ದರ್ಶನಕ್ಕೆ ಸಂಪ್ರಾದಾಯಿಕ ಉಡುಗೆ ಕಡ್ಡಾಯ | ಆಡಳಿತ ಮಂಡಳಿ ನಿರ್ಧಾರ

ಶೃಂಗೇರಿ: ಶ್ರೀ ಕ್ಷೇತ್ರ ಶೃಂಗೇರಿಯ ಶಾರದಾಂಬೆಯ ದರ್ಶನಕ್ಕೆ ಬರುವ ಭಕ್ತಾದಿಗಳು ಆ.15 ರಿಂದ ಭಾರತೀಯ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯವಾಗಿ ತೊಡಬೇಕೆಂದು ಆದೇಶಿಸಿದೆ. ಈ ಕುರಿತು  ಶೃಂಗೇರಿ ಶಾರದಾಂಬೆ ಆಡಳಿತ ಮಂಡಳಿ  ನಿರ್ಧರಿಸಿದೆ. ಸಾಂಪ್ರದಾಯಿಕವಲ್ಲದ ಉಡುಗೆ ತೊಟ್ಟು ಬಂದವರಿಗೆ ಅರ್ಧಮಂಟಪದ ಒಳಗೆ ಪ್ರವೇಶವಿರುವುದಿಲ್ಲ, ಬದಲಾಗಿ ಹೊರಗಿನಿಂದಲೇ ದೇವರ ದರ್ಶನ ಮಾಡಬೇಕಾಗುತ್ತದೆ ಎಂದು ತಿಳಿಸಿದೆ. ಸಾಂಪ್ರದಾಯಿ ಉಡುಗೆ ಹೀಗಿದೆ ಪುರುಷರು ಧೋತಿ ಅಥವಾ ಶಲ್ಯ ಮತ್ತು ಉತ್ತರೀಯ ಹಾಗೂ ಮಹಿಳೆಯರು ಸೀರೆ, ರವಿಕೆ, ಸಲ್ವಾರ್ ಜೊತೆಗೆ ದುಪ್ಪಟ ಅಥವಾ ಲಂಗ […]

ಶ್ರೀ ಕ್ಷೇತ್ರ ಶೃಂಗೇರಿ ಶಾರದಾಂಬ ದರ್ಶನಕ್ಕೆ ಸಂಪ್ರಾದಾಯಿಕ ಉಡುಗೆ ಕಡ್ಡಾಯ | ಆಡಳಿತ ಮಂಡಳಿ ನಿರ್ಧಾರ Read More »

ವಿದೇಶಕ್ಕೆ ತೆರಳಿದ ಪುತ್ತೂರಿನ ಯುವಕ ಸಂಶಯಾಸ್ಪದ ಸಾವು | ನ್ಯಾಯ ಒದಗಿಸುವಂತೆ ಹೆತ್ತವರಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟರಿಗೆ ಮನವಿ

ಪುತ್ತೂರು: 3 ತಿಂಗಳ ಹಿಂದೆ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಿದ ನಗರದ ಕಲ್ಲೇಗ ಅಜೇಯನಗರ ನಿವಾಸಿ ಭರತ್ ಕುಮಾರ್ ಎಂಬವರು ಮೃತಪಟ್ಟಿದ್ದು, ಮಗನ ಸಾವಿನ ಬಗ್ಗೆ ನಮಗೆ ಸಂಶಯವಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ನಮಗೆ  ಒದಗಿಸಿಕೊಡಬೇಕು ಎಂದು ಮೃತ ಭರತ್ ಕುಮಾರ್ ಅವರ ತಾಯಿ ಸಂಸದ ಕ್ಯಾ|ಬ್ರಿಜೇಶ್ ಚೌಟರಿಗೆ ಮನವಿ ಸಲ್ಲಿಸಿದ್ದಾರೆ. ನಾನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಅಜೇಯ ನಗರ ನಿವಾಸಿ ಭರತ್ ಕುಮಾರ್ 44 ವರ್ಷ ಇವರ ತಾಯಿ ಸುಲೋಚನಾ.

ವಿದೇಶಕ್ಕೆ ತೆರಳಿದ ಪುತ್ತೂರಿನ ಯುವಕ ಸಂಶಯಾಸ್ಪದ ಸಾವು | ನ್ಯಾಯ ಒದಗಿಸುವಂತೆ ಹೆತ್ತವರಿಂದ ಸಂಸದ ಕ್ಯಾ. ಬ್ರಿಜೇಶ್ ಚೌಟರಿಗೆ ಮನವಿ Read More »

ಪುತ್ತೂರಿನಲ್ಲಿ ಮೇಳೈಸಿದ ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷಾಚರಣೆ | ತೆರೆದ ವಾಹನದಲ್ಲಿ ಕರೆದೊಯ್ಯುವ ಮೂಲಕ ಇಬ್ಬರು ಕಾರ್ಗಿಲ್ ಯೋಧರಿಗೆ ಗೌರವಾರ್ಪಣೆ

ಪುತ್ತೂರು: ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ, ಪುತ್ತೂರು ಮಾಜಿ ಸೈನಿಕರ ಸಂಘ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷಾಚರಣೆ ಆಡಳಿತ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೀತಿ ಸ್ಮಾರಕದ ಬಳಿ ಶುಕ್ರವಾರ ನಡೆಯಿತು. ಕಾರ್ಗಿಲ್ ವರ್ಷಾಚರಣೆ ಅಂಗವಾಗಿ ನಗರದ ದರ್ಬೆ ವೃತ್ತದಿಂದ ಬೆಳಿಗ್ಗೆ 9.30 ಕ್ಕೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಬ್ಯಾಂಡ್‍, ವಾದ್ಯಗಳೊಂದಿಗೆ ಪಥ ಸಂಚಲನ, ದೇಶ ಹಾಗೂ ಮಿಲಿಟರಿ ಶಕ್ತಿಯನ್ನು ಅನಾವರಣಗೊಳಿಸುವ ಸ್ತಬ್ಧಚಿತ್ರ ಮೂಲಕ

ಪುತ್ತೂರಿನಲ್ಲಿ ಮೇಳೈಸಿದ ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷಾಚರಣೆ | ತೆರೆದ ವಾಹನದಲ್ಲಿ ಕರೆದೊಯ್ಯುವ ಮೂಲಕ ಇಬ್ಬರು ಕಾರ್ಗಿಲ್ ಯೋಧರಿಗೆ ಗೌರವಾರ್ಪಣೆ Read More »

ಉಕ್ಕಿ ಹರಿಯುತ್ತಿರುವ ಉಪ್ಪಿನಂಗಡಿ ನೇತ್ರಾವತಿ, ಕುಮಾರಧಾರ ನದಿ | ಭೇಟಿ ನೀಡಿ ಪರಿಶೀಲಿಸಿದ ಸಂಜೀವ ಮಠಂದೂರು

ಉಪ್ಪಿನಂಗಡಿ : ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉಪ್ಪಿನಂಗಡಿ ನೇತ್ರಾವತಿ, ಕುಮಾರಧಾರ ನದಿಗಳು ಉಕ್ಕಿ ಹರಿಯುತ್ತಿದ್ದು, ಸ್ಥಳಕ್ಕೆ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಹಾಗೂ ಪುತ್ತೂರು ತಹಸೀಲ್ದಾರ್ ಪುರಂದರ ಹೆಗ್ಡೆ ಇಂದು ಭೇಟಿ ಪರೀಶಿಲನೆ ಮಾಡಿದರು. ಕುಮಾರಧಾರ ಹಾಗೂ ನೇತ್ರಾವತಿ ನದಿಗಳೆರಡೂ ತುಂಬಿ ಹರಿಯುತ್ತಿದ್ದು, ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಪೊಲೀಸರು ಸಾರ್ವಜನಿಕರು ನೀರಿನ ಬಳಿ ತೆರಳದಂತೆ ಎಚ್ಚರಿಕೆ ವಹಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಯ್ಕ್, ದೇವಸ್ಥಾನದ ಆಡಳಿತ

ಉಕ್ಕಿ ಹರಿಯುತ್ತಿರುವ ಉಪ್ಪಿನಂಗಡಿ ನೇತ್ರಾವತಿ, ಕುಮಾರಧಾರ ನದಿ | ಭೇಟಿ ನೀಡಿ ಪರಿಶೀಲಿಸಿದ ಸಂಜೀವ ಮಠಂದೂರು Read More »

ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿನಿ ಮೃತ್ಯು

ಮಂಗಳೂರು : ಗದ್ದೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ  ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದಲ್ಲಿ ನಡೆದಿದೆ. ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬುವರ ಪುತ್ರಿ ಆಶ್ನಿ (21) ಮೃತ ವಿದ್ಯಾರ್ಥಿನಿ. ಮೊದಲಿಗೆ ಮನೆಯ ಸಾಕು ನಾಯಿಗೆ ವಿದ್ಯುತ್‌ ಶಾಕ್ ಹೊಡೆದಿದ್ದು, ನಾಯಿ ಹೊರಳಾಡುವುದನ್ನು ನೋಡಿ ರಕ್ಷಣೆಗೆ ಮುಂದಾದ ಆಶ್ನಿ, ತುಂಡಾಗಿ ಬಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿನಿ ಮೃತ್ಯು Read More »

ಅನಾರೋಗ್ಯ : ಮಹಿಳೆ ಮೃತ್ಯು

ಸುಳ್ಯ : ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಪಡುಮಜಲು ಮನೆಯವರಾಗಿದ್ದು, ಮಂಗಳೂರಿನಲ್ಲಿ ನೆಲೆಸಿರುವ ಅವಿನ್ ಎಂಬವರ ಪತ್ನಿ ಶಿಲ್ಪಾ (32) ಅಸೌಖ್ಯದಿಂದಾಗಿ ಮಂಗಳೂರಿನಲ್ಲಿ ನಿಧನರಾದರು. ಶಿಲ್ಪಾ ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವಿನ್ ಮಂಗಳೂರಿನಲ್ಲಿ ಪೊಲೀಸ್‌ ಇಲಾಖೆಯಲ್ಲಿ ಕೆಲಸದಲ್ಲಿದ್ದರು ಹಾಗೂ ಶಿಲ್ಪಾ ಆಯುಷ್ಮಾನ್ ಆರೋಗ್ಯ ಮಂದಿರದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಯಾಗಿದ್ದರು.

ಅನಾರೋಗ್ಯ : ಮಹಿಳೆ ಮೃತ್ಯು Read More »

ಭಾರೀ  ಭೂಕುಸಿತ | ಮಚ್ಚಿಮಲೆ-ಬಲ್ನಾಡು ಸಂಪರ್ಕ ಸಂಪೂರ್ಣ ಕಡಿತ

ಪುತ್ತೂರು : ಆರ್ಯಾಪು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಎಕ್ರೆಜಾಲ್ ನಲ್ಲೊಂದು ಭೂಕುಸಿತ ಇಂದು ನಡೆದಿದೆ. ಮಚ್ಚಿಮಲೆ-ಬಲ್ನಾಡು ಸಂಪರ್ಕಿಸುವ ಮಾರ್ಗ ಮಧ್ಯೆ ಈ ಭೂಕುಸಿತ ಉಂಟಾಗಿದ್ದು, ಕಾಂಕ್ರಿಟ್ ರಸ್ತೆಯ ಪಕ್ಕದಿಂದಲೇ ಭೂಕುಸಿತ ಉಂಟಾಗಿದೆ. ಸುಮಾರು 40 ಅಡಿ ಎತ್ತರದಿಂದ ಮಣ್ಣು ಮರಗಳೆಲ್ಲ ಇಳಿಜಾರಿಗೆ ಬಿದ್ದಿದೆ. ಅಕ್ಕಪಕ್ಕದಲ್ಲಿ ಯಾವುದೇ ಮನೆಗಳು ಇಲ್ಲದಿರುವುದರಿಂದ ಅಪಾಯ ತಪ್ಪಿದೆ. 100 ಮೀಟ‌ರ್ ಅಂತರದಲ್ಲಿ ಒಂದು ಮನೆ ಇರುವುದು ಬಿಟ್ಟರೆ, ಬೇರೆ ಯಾವುದೇ ಅಪಾಯದ ಭೀತಿ ಇಲ್ಲ. ಸದ್ಯ ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಭಾರೀ  ಭೂಕುಸಿತ | ಮಚ್ಚಿಮಲೆ-ಬಲ್ನಾಡು ಸಂಪರ್ಕ ಸಂಪೂರ್ಣ ಕಡಿತ Read More »

ತುಂಬಿ ಹರಿಯುತ್ತಿರುವ ಪಂಜ ಹೊಳೆ | ಸಂಚಾರ ಸ್ಥಗಿತಕ್ಕೆ ಬ್ಯಾರಿಕೇಡ್ ಅಳವಡಿಕೆ

ಪಂಜ : ಭಾರೀ ಮಳೆಯಿಂದ ಜು.19 ರಂದು ಮುಂಜಾನೆಯಿಂದ ಪಂಜ ಹೊಳೆ ತುಂಬಿ ಹರಿಯುತ್ತಿದ್ದು, ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಗೆ ಹೊಳೆಯ ನೆರೆ ನೀರು ಆವರಿಸಿದೆ. ಹೊಳೆ ಸಮೀಪದ ಕೃಷಿ ತೋಟದಲ್ಲಿ ನೆರೆ ನೀರು ನುಗ್ಗಿದೆ. ಬೊಳ್ಳಲೆ ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆಗೊಂಡಿದೆ. ಪರಿಣಾಮವಾಗಿ ಕಿಂಡಿ ಅಣೆಕಟ್ಟು ಮೇಲಿರುವ ಬಸ್ತಿಕಾಡು ಪ್ರದೇಶದ ಅನೇಕ ಮನೆಗಳಿಗೆ ಸಂಪರ್ಕಿಸುವ ರಸ್ತೆ ಕಡಿತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಈ ರಸ್ತೆ ಸಂಚಾರ ಸ್ಥಗಿತಗೊಳಿಸಿದರುವುದಾಗಿ ಬ್ಯಾರಿಕೇಡ್ ಹಾಕಿ ಬ್ಯಾನ‌ರ್ ಅಳವಡಿಸಲಾಗಿದೆ. ಇದೀಗ ನೀರಿನ ಹರಿವು

ತುಂಬಿ ಹರಿಯುತ್ತಿರುವ ಪಂಜ ಹೊಳೆ | ಸಂಚಾರ ಸ್ಥಗಿತಕ್ಕೆ ಬ್ಯಾರಿಕೇಡ್ ಅಳವಡಿಕೆ Read More »

ಲಾರಿ ಪಲ್ಟಿ ಓರ್ವ ಮೃತ್ಯು ಇಬ್ಬರು ಗಂಭೀರ

ಬಂಟ್ವಾಳ : ಪುಂಜಾಲಕಟ್ಟೆ ಎಂಬಲ್ಲಿ ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು ಇನ್ನು ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನುಳಿದಂತೆ ಗಾಯಗೊಂಡವರ ಹೆಸರು ಮಾಹಿತಿ ಲಭ್ಯವಾಗಿಲ್ಲ. ವಗ್ಗ ಸಮೀಪದ ಮಧ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಐಶರ್ ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಮಂದಿರದ ಬಳಿ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ. ಲಾರಿಯೊಳಗೆ ಒಟ್ಟು ಹತ್ತು ಮಂದಿ

ಲಾರಿ ಪಲ್ಟಿ ಓರ್ವ ಮೃತ್ಯು ಇಬ್ಬರು ಗಂಭೀರ Read More »

ಮನೆ ಮೇಲೆ ಬೃಹತ್ ಮರ ಬಿದ್ದು ಹಾನಿ | ಎನ್‍ ಎಸ್‍ ಯುಐ ಕಾರ್ಯಕರ್ತರಿಂದ ಶೀಟ್, ಕಂಬ, ಸಿಮೆಂಟ್ ಕೊಡುಗೆ

ಪುತ್ತೂರು: ಕೌಡಿಚ್ಚರ್ ನಲ್ಲಿ ಮೂರು ದಿನಗಳ ಹಿಂದೆ ಎರಡು ಮನೆಗಳ ಮೇಲೆ ಬೃಹತ್ ಮರ ಬಿದ್ದು ಹಾನಿಯಾಗಿದ್ದು, ಸ್ಥಳಕ್ಕೆ ಎನ್‍ ಎಸ್‍ ಯು ಐ ಪುತ್ತೂರಿನ ಪ್ರಮುಖರು ಭೇಟಿ ನೀಡಿದ್ದರು. ಬಳಿಕ ತಹಶೀಲ್ದಾರ್ ಸೇರಿದಂತೆ ಹಲವರು ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದರು. ಮನೆಯವರ ಕಷ್ಟವನ್ನು ಅರಿತ ಎನ್ ಎಸ್‍ ಯುಐ  ಪ್ರಮುಖ ಪ್ರಜ್ವಲ್ ಕೌಡಿಚ್ಚಾರ್ ಸಹಿತ ಕಾರ್ಯಕರ್ತರು ಹಾನಿಗೊಳಗಾಗಿದ್ದ ಮನೆ ಸರಿಪಡಿಸಲು ಅಗತ್ಯವಿದ್ದ ಶೀಟ್, ಕಂಬ, ಸಿಮೆಂಟ್ ಮೊದಲಾದವುಗಳನ್ನು ನೀಡಿದರು. ರಾಜ್ಯ ಎನ್‍ ಎಸ್‍ ಯುಐ ಕಾರ್ಯದರ್ಶಿ

ಮನೆ ಮೇಲೆ ಬೃಹತ್ ಮರ ಬಿದ್ದು ಹಾನಿ | ಎನ್‍ ಎಸ್‍ ಯುಐ ಕಾರ್ಯಕರ್ತರಿಂದ ಶೀಟ್, ಕಂಬ, ಸಿಮೆಂಟ್ ಕೊಡುಗೆ Read More »

error: Content is protected !!
Scroll to Top