yuvathi

ರೈಲಿಗೆ ಸಿಲುಕಿ ಯುವತಿ ಮೃತ್ಯು !

ತುಮಕೂರು : ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ವಿದ್ಯಾರ್ಥಿನಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ವರ್ಷಿಣಿ (19) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ವರ್ಷಿಣಿ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪುತ್ರಿ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದಳು. ತನ್ನ ಊರಿನಿಂದ ಕಾಲೇಜಿಗೆ ಪ್ರತಿದಿನ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಳು. ನಿನ್ನೆ ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ […]

ರೈಲಿಗೆ ಸಿಲುಕಿ ಯುವತಿ ಮೃತ್ಯು ! Read More »

ಯುವತಿ ನೇಣು ಬಿಗಿದು ಆತ್ಮಹತ್ಯೆ !

ಕಾಣಿಯೂರು: ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರಿನಲ್ಲಿ ನಡೆದಿದೆ. ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಅನಿಲ ಮನೆಯ ಪದ್ಮಯ್ಯ ಗೌಡರ ಪುತ್ರಿ ದಿವ್ಯಾಶ್ರೀ (26) ಆತ್ಮಹತ್ಯೆ ಮಾಡಿಕೊಂಡವರು. ಅಪಪ್ರಚಾರಕ್ಕೆ ಮನನೊಂದು ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ತಕ್ಷಣ ಗಮನಿಸಿದ ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಯುವತಿ ಮೃತಪಟ್ಟರೆನ್ನಲಾಗಿದೆ. ಬೆಳ್ಳಾರೆ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.

ಯುವತಿ ನೇಣು ಬಿಗಿದು ಆತ್ಮಹತ್ಯೆ ! Read More »

ಯುವತಿ ಪ್ರಮೀಳಾ ನಾಪತ್ತೆ !

ಕಾರ್ಕಳ: ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದಲ್ಲಿ ಮನೆಯಿಂದ ಹೊರಗೆ ಹೋದ ಯುವತಿಯೋರ್ವಳು ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ನಾಪತ್ತೆಯಾದ ಯುವತಿ. ಫೆ.24 ರಂದು ಮನೆಯಿಂದ ಹೊರಗೆ ಹೋದ ಯುವತಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುವ ಪ್ರಮೀಳಾ ಕನ್ನಡ, ತುಳು, ಇಂಗ್ಲೀಷ್ ಭಾಷೆ ಬಲ್ಲವರಾಗಿದ್ದಾರೆ. ಮಾಹಿತಿ ದೊರೆತಲ್ಲಿ ಅಜೆಕಾರು ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ : 08253-271100, ಪೊಲೀಸ್ ಉಪನಿರೀಕ್ಷಕರು

ಯುವತಿ ಪ್ರಮೀಳಾ ನಾಪತ್ತೆ ! Read More »

error: Content is protected !!
Scroll to Top